<p><strong>ಕೆ.ಆರ್.ಪುರ</strong>: ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿರುವ ಪತಿ ಮತ್ತು ಅವರ ಮನೆಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಂತ್ರಸ್ತೆಯೊಂದಿಗೆ ನೂರಾರು ಸ್ಥಳೀಯರು ವಿಜಿನಾಪುರದ ಕೊತ್ತೂರಿನಿಂದ ರಾಮಮೂರ್ತಿನಗರ ಠಾಣೆವರೆಗೆ ಪ್ರತಿಭಟನೆ ನಡೆಸಿ, ನಂತರ ಪೋಲಿಸರಿಗೆ ದೂರು ನೀಡಿದರು.</p>.<p>ಸಂತ್ರಸ್ತೆ ತಸ್ಲಿಂ ಭಾನು ಮಾತನಾಡಿ, ‘ನನಗೆ ವಿಜಿನಾಪುರದ ನಿವಾಸಿ ಸದ್ದಾಂ ಹುಸೇನ್ ಎಂಬಾತನೊಂದಿಗೆ ವಿವಾಹವಾಗಿದೆ. ಮದುವೆ ಆದಾಗಿನಿಂದ ನನ್ನ ಪತಿ ನಿತ್ಯ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾನೆ. ಪತಿ ಕೆಲಸಕ್ಕೆ ಹೋದಾಗ ನನ್ನ ಮಾವ ಮೈಕೈ ಮುಟ್ಟಿ ಅಸಭ್ಯವಾಗಿ ನಡೆದುಕೊಳ್ಳುತ್ತಾರೆ. ಈ ಬಗ್ಗೆ ಅತ್ತೆ ಮತ್ತು ಪತಿಗೆ ತಿಳಿಸಿದಾಗ ನಿನ್ನನ್ನು ದುಡ್ಡು ಕೊಟ್ಟು ಖರೀದಿಸಿಕೊಂಡು ಬಂದಿದ್ದೇವೆ. ನಿಮ್ಮ ಮಾವ ಹೇಳಿದಂತೆ ಕೇಳು, ಇಲ್ಲದಿದ್ದರೆ ತವರು ಮನೆಗೆ ಹೋಗು’ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.</p>.<p>ಈ ಹಿಂದೆ, ಮಾವ, ಪತಿ ಹಾಗೂ ಅವರ ಮನೆಯವರು ನನ್ನನ್ನು ಥಳಿಸಿ, ನಿತ್ಯ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಅವರ ವಿರುದ್ಧ ದೂರು ದಾಖಲಿಸಿದ್ದೆ. ಆದರೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ನನ್ನ ಮಾವ, ಪತಿಯಿಂದ ರಕ್ಷಣೆ ನೀಡಿ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿದರು.</p>.<p><strong>ಎಫ್ಐಆರ್ ದಾಖಲು</strong>: ಸಂತ್ರಸ್ಥೆಯ ದೂರು ಸ್ವೀಕರಿಸಿದ ಪೊಲೀಸರು ಸಂಜೆಯ ವೇಳೆಗೆ, ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ</strong>: ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿರುವ ಪತಿ ಮತ್ತು ಅವರ ಮನೆಯವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಂತ್ರಸ್ತೆಯೊಂದಿಗೆ ನೂರಾರು ಸ್ಥಳೀಯರು ವಿಜಿನಾಪುರದ ಕೊತ್ತೂರಿನಿಂದ ರಾಮಮೂರ್ತಿನಗರ ಠಾಣೆವರೆಗೆ ಪ್ರತಿಭಟನೆ ನಡೆಸಿ, ನಂತರ ಪೋಲಿಸರಿಗೆ ದೂರು ನೀಡಿದರು.</p>.<p>ಸಂತ್ರಸ್ತೆ ತಸ್ಲಿಂ ಭಾನು ಮಾತನಾಡಿ, ‘ನನಗೆ ವಿಜಿನಾಪುರದ ನಿವಾಸಿ ಸದ್ದಾಂ ಹುಸೇನ್ ಎಂಬಾತನೊಂದಿಗೆ ವಿವಾಹವಾಗಿದೆ. ಮದುವೆ ಆದಾಗಿನಿಂದ ನನ್ನ ಪತಿ ನಿತ್ಯ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾನೆ. ಪತಿ ಕೆಲಸಕ್ಕೆ ಹೋದಾಗ ನನ್ನ ಮಾವ ಮೈಕೈ ಮುಟ್ಟಿ ಅಸಭ್ಯವಾಗಿ ನಡೆದುಕೊಳ್ಳುತ್ತಾರೆ. ಈ ಬಗ್ಗೆ ಅತ್ತೆ ಮತ್ತು ಪತಿಗೆ ತಿಳಿಸಿದಾಗ ನಿನ್ನನ್ನು ದುಡ್ಡು ಕೊಟ್ಟು ಖರೀದಿಸಿಕೊಂಡು ಬಂದಿದ್ದೇವೆ. ನಿಮ್ಮ ಮಾವ ಹೇಳಿದಂತೆ ಕೇಳು, ಇಲ್ಲದಿದ್ದರೆ ತವರು ಮನೆಗೆ ಹೋಗು’ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.</p>.<p>ಈ ಹಿಂದೆ, ಮಾವ, ಪತಿ ಹಾಗೂ ಅವರ ಮನೆಯವರು ನನ್ನನ್ನು ಥಳಿಸಿ, ನಿತ್ಯ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ಅವರ ವಿರುದ್ಧ ದೂರು ದಾಖಲಿಸಿದ್ದೆ. ಆದರೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ನನ್ನ ಮಾವ, ಪತಿಯಿಂದ ರಕ್ಷಣೆ ನೀಡಿ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿದರು.</p>.<p><strong>ಎಫ್ಐಆರ್ ದಾಖಲು</strong>: ಸಂತ್ರಸ್ಥೆಯ ದೂರು ಸ್ವೀಕರಿಸಿದ ಪೊಲೀಸರು ಸಂಜೆಯ ವೇಳೆಗೆ, ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>