ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಗಲಾಟೆ: ವರದಿ ನೀಡಲು ಸೂಚನೆ

Last Updated 22 ನವೆಂಬರ್ 2019, 2:11 IST
ಅಕ್ಷರ ಗಾತ್ರ

ಬೆಂಗಳೂರು: ‘ವೈದ್ಯರೊಬ್ಬರು ಕಿರುಕುಳ ನೀಡಿದ್ದಾರೆ’ ಎಂದುಮಹಿಳಾ ವೈದ್ಯರು ವಿವಿ ಪುರ ಠಾಣೆಯಲ್ಲಿ ದಾಖಲಿಸಿದ ದೂರಿಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ.

ವಿಕ್ಟೋರಿಯಾ ಆಸ್ಪತ್ರೆಯಟ್ರಾಮಾ ಕೇಂದ್ರದಲ್ಲಿ ಕಾಯಕಲ್ಪ ಪರಿವೀಕ್ಷಣೆ ಸಂದರ್ಭದಲ್ಲಿ ಡಾ.ಮಧುಸೂದನ್‌ ಹಾಗೂ ವೈದ್ಯರ ನಡುವೆಬುಧವಾರ ಮಾತಿನ ಚಕಮಕಿ ನಡೆದಿತ್ತು.

ಮಧುಸೂದನ್ ಕಂಪ್ಯೂಟರ್‌ ಕೀ ಬೋರ್ಡ್‌ ಒಡೆದು ಹಾಕಿದ್ದಾರೆ ಎಂದು ಸಿಬ್ಬಂದಿ ದೂರಿದ್ದರು. ಘಟನೆಗೆ ಸಂಬಂಧಿಸಿದಂತೆ 15 ಮಹಿಳಾ ವೈದ್ಯರು ಹಾಗೂ ಮಧುಸೂದನ್‍ಪರಸ್ಪರ ದೂರು ದಾಖಲಿಸಿದ್ದರು.

‘ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಹಿರಿಯ ವೈದ್ಯರೊಂದಿಗೆ ಚರ್ಚಿಸಲಾಗುವುದು. ಈ ಬಗ್ಗೆ ವರದಿಯನ್ನೂ ಕೇಳಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದರು.

ಟ್ರಾಮಾ ಕೇಂದ್ರದ ವಿಶೇಷ ಅಧಿಕಾರಿ ಡಾ. ಬಾಲಾಜಿ ಪೈ ಹಾಗೂ ಹಿರಿಯ ವೈದ್ಯರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಮತ್ತು ಜಾವೇದ್ ಅಖ್ತರ್ ಅವರನ್ನು ಭೇಟಿ ಮಾಡಿ, ಘಟನೆಯ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT