‘ಆರೋಪಿ ಅರ್ಬಾಜ್, ದೂರುದಾರ ಮಹಿಳೆಯ ಸಂಬಂಧಿಕ. ಮಹಿಳೆಗೆ ಮದುವೆಯಾಗಿದ್ದು, ಅಷ್ಟಾದರೂ ಆರೋಪಿ ತನ್ನನ್ನು ಎರಡನೇ ಮದುವೆಯಾಗುವಂತೆ ಪೀಡಿಸುತ್ತಿದ್ದ. ಅದಕ್ಕೆ ಒಪ್ಪದ ಮಹಿಳೆ, ಪತಿಗೆ ವಿಷಯ ತಿಳಿಸಿದ್ದರು. ನಂತರ, ಹಿರಿಯರ ಸಮ್ಮುಖದಲ್ಲಿ ಆರೋಪಿಗೆ ಬುದ್ಧಿವಾದ ಹೇಳಲಾಗಿತ್ತು. ವಿವಾಹಿತೆ ಮಹಿಳೆ ತಂಟೆಗೆ ಹೋಗದಂತೆ ತಾಕೀತು ಮಾಡಲಾಗಿತ್ತು’ ಎಂದು ತಿಳಿಸಿದರು.