ಬೆಂಗಳೂರು: ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದಲ್ಲದೇ ಅಶ್ಲೀಲ ಶಬ್ದಗಳಿಂದ ನಿಂದಿಸಿರುವ ಮೆಟ್ರೊ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ನಿಲ್ದಾಣದ ಇನ್ಚಾರ್ಜ್ ಗಜೇಂದ್ರನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು, ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ನೇತೃತ್ವದಲ್ಲಿ ಗುರುವಾರ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಗೊಂಡಿತು.