<p><strong>ಬೆಂಗಳೂರು</strong>: ಮಹಿಳೆಗೆ ಕಿರುಕುಳ ನೀಡುತ್ತಿದ್ದ ಆರೋಪದ ಅಡಿ ಇಂದಿರಾನಗರ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಹಾಗೂ ಇತರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಸಂತನಗರದ ಪೊಲೀಸ್ ಕ್ವಾಟ್ರರ್ಸ್ ನಿವಾಸಿ ರೇಖಾ ಅವರು ನೀಡಿದ ದೂರಿನ ಮೇರೆಗೆ ಇಂದಿರಾನಗರ ಠಾಣೆಯ ಕಾನ್ಸ್ಟೆಬಲ್ ಮನೋಜ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಸದ್ಯ ಕಾನ್ಸ್ಟೆಬಲ್ ನಾಪತ್ತೆ ಆಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ದೂರುದಾರೆ ರೇಖಾ ಅವರ ಪತಿ ಅಪಘಾತದಲ್ಲಿ ಮೃತಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸಲು ನ್ಯಾಯಾಲಯಕ್ಕೆ ಹೋಗಿದ್ದ ವೇಳೆ ಮನೋಜ್ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸ್ನೇಹಿತರಾಗಿದ್ದು, ನಂತರ ಪ್ರೀತಿಗೆ ತಿರುಗಿ, ಕಳೆದ ವರ್ಷ ಮದುವೆ ಆಗಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಕೆಲವು ದಿನಗಳ ಹಿಂದೆ ಪೊಲೀಸ್ ಕ್ವಾಟ್ರಸ್ಗೆ ಬಂದಿದ್ದ ಮನೋಜ್ ಅವರ ಸಹೋದರಿಯರು ರೇಖಾಗೆ ನಿಂದಿಸಿದ್ದರು. ಅದಾದ ಮೇಲೆ ಮನೋಜ್ ಹಾಗೂ ರೇಖಾ ಮಧ್ಯೆ ಗಲಾಟೆ ಆರಂಭವಾಗಿತ್ತು. ವಿಚ್ಛೇದನ ಕೊಡುವಂತೆ ಮನೋಜ್ ಪೀಡಿಸುತ್ತಿದ್ದರು. ಹಲ್ಲೆಯನ್ನೂ ನಡೆಸಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಹಿಳೆಗೆ ಕಿರುಕುಳ ನೀಡುತ್ತಿದ್ದ ಆರೋಪದ ಅಡಿ ಇಂದಿರಾನಗರ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಹಾಗೂ ಇತರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಸಂತನಗರದ ಪೊಲೀಸ್ ಕ್ವಾಟ್ರರ್ಸ್ ನಿವಾಸಿ ರೇಖಾ ಅವರು ನೀಡಿದ ದೂರಿನ ಮೇರೆಗೆ ಇಂದಿರಾನಗರ ಠಾಣೆಯ ಕಾನ್ಸ್ಟೆಬಲ್ ಮನೋಜ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಸದ್ಯ ಕಾನ್ಸ್ಟೆಬಲ್ ನಾಪತ್ತೆ ಆಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ದೂರುದಾರೆ ರೇಖಾ ಅವರ ಪತಿ ಅಪಘಾತದಲ್ಲಿ ಮೃತಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸಲು ನ್ಯಾಯಾಲಯಕ್ಕೆ ಹೋಗಿದ್ದ ವೇಳೆ ಮನೋಜ್ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸ್ನೇಹಿತರಾಗಿದ್ದು, ನಂತರ ಪ್ರೀತಿಗೆ ತಿರುಗಿ, ಕಳೆದ ವರ್ಷ ಮದುವೆ ಆಗಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ಕೆಲವು ದಿನಗಳ ಹಿಂದೆ ಪೊಲೀಸ್ ಕ್ವಾಟ್ರಸ್ಗೆ ಬಂದಿದ್ದ ಮನೋಜ್ ಅವರ ಸಹೋದರಿಯರು ರೇಖಾಗೆ ನಿಂದಿಸಿದ್ದರು. ಅದಾದ ಮೇಲೆ ಮನೋಜ್ ಹಾಗೂ ರೇಖಾ ಮಧ್ಯೆ ಗಲಾಟೆ ಆರಂಭವಾಗಿತ್ತು. ವಿಚ್ಛೇದನ ಕೊಡುವಂತೆ ಮನೋಜ್ ಪೀಡಿಸುತ್ತಿದ್ದರು. ಹಲ್ಲೆಯನ್ನೂ ನಡೆಸಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>