ಬಿಜೆಪಿ ಆಡಳಿತದ ಕಾಲದಲ್ಲಿ ಆಗಿನ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅಧ್ಯಕ್ಷರಾಗಿದ್ದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ವಿಶ್ವನಾಥ್ ರಾಜೀನಾಮೆ ನೀಡಿದ್ದರು. ಎನ್.ಎ. ಹ್ಯಾರಿಸ್, ಎಂ. ಕೃಷ್ಣಪ್ಪ, ಪ್ರಿಯಕೃಷ್ಣ ಸಹಿತ ಹಲವರು ಅಧ್ಯಕ್ಷ ಸ್ಥಾನಕ್ಕಾಗಿ ಆಗ ಪ್ರಯತ್ನಿಸಿದ್ದರು. ಆದರೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಜನಪ್ರತಿನಿಧಿಗಳಿಗೆ ಮಣೆ ಹಾಕುವ ಪದ್ಧತಿಯನ್ನು ಬಿಟ್ಟು, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿತ್ತು.