ಅರಣ್ಯಾಧಿಕಾರಿಗಳ ಕಣ್ತಪ್ಪಿಸಿ ಆರೋಪಿಗಳು, ಆಂಧ್ರಪ್ರದೇಶದ ವಿಶಾಖಪಟ್ಟಣದ ಅರಕು ಹಾಗೂ ಸೆಂಥಿಪಲ್ಲಿ ಅರಣ್ಯಕ್ಕೆ ನುಗ್ಗಿ ಅಲ್ಲಿ ಗಾಂಜಾ ಬೆಳೆದು ಹ್ಯಾಶಿಶ್ ಆಯಿಲ್ ತಯಾರಿಸುತ್ತಿದ್ದರು. ಅದನ್ನು ಕೊಚ್ಚಿ, ಚೆನ್ನೈ, ಹೈದರಾಬಾದ್, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರದ ಗ್ರಾಹಕರಿಗೆ ಪೂರೈಸುತ್ತಿದ್ದರು. ಪ್ರಕರಣದ ಯಾವುದೇ ಕುರುಹು ಸಿಗದಂತೆ ತಂತ್ರ ರೂಪಿಸಿದ್ದರು. ಯಾರೂ ಮೊಬೈಲ್ ಹಾಗೂ ಗುರುತಿನ ಚೀಟಿ ಬಳಸುತ್ತಿರಲಿಲ್ಲ ಎಂದು ಸಿಸಿಬಿ ಮೂಲಗಳು ತಿಳಿಸಿವೆ.