<p><strong>ಬೆಂಗಳೂರು:</strong> ‘ಅಬಲೆಯರನ್ನು ಗೌರವಿಸೋಣ - ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ’ ಎಂಬ ಘೋಷ ವಾಕ್ಯದಡಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷವು ಸೋಮವಾರ ‘ಹಾಸನ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಮಂಜುನಾಥ್ ಎಸ್. ‘ಸಂಸದ ಪ್ರಜ್ವಲ್ ರೇವಣ್ಣ ತನ್ನ ಬಳಿಗೆ ಸಹಾಯ ಯಾಚಿಸಿ ಬಂದ ನೂರಾರು ಹೆಣ್ಣುಮಕ್ಕಳನ್ನು, ಅಧಿಕಾರ ಮತ್ತು ಸಾಂದರ್ಭಿಕ ಲಾಭ ಪಡೆದು ಲೈಂಗಿಕವಾಗಿ ಶೋಷಣೆ ಮಾಡಿರುವುದನ್ನು ಖಂಡಿಸಿ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>‘ಪೆನ್ ಡ್ರೈವ್ ಪ್ರಕರಣದ ಕುರಿತು ಪಾರದರ್ಶಕವಾಗಿ ತನಿಖೆ ಆಗಬೇಕು. ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕಾದರೆ ಪ್ರಜ್ವಲ್ ರೇವಣ್ಣ ಕುಟುಂಬದ ಕೃಪಾಕಟಾಕ್ಷದಿಂದ ಹಾಸನ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಆ ಕುಟುಂಬದ ಋಣದಲ್ಲಿರುವುದಾಗಿ ಭಾವಿಸಿರುವ ಹಲವಾರು ನೌಕರರು ಹಾಗೂ ಅಧಿಕಾರಿಗಳನ್ನು ಈ ಪ್ರಕರಣದ ತನಿಖೆ ಮುಗಿಯುವವರೆಗೆ ಬೇರೆ ಜಿಲ್ಲೆಗೆ ವರ್ಗಾಯಿಸಬೇಕು’ ಎಂದು ಆಗ್ರಹಿಸಿದರು.</p>.<p>ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳು ಕೇವಲ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿವೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಬಲೆಯರನ್ನು ಗೌರವಿಸೋಣ - ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ’ ಎಂಬ ಘೋಷ ವಾಕ್ಯದಡಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷವು ಸೋಮವಾರ ‘ಹಾಸನ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಮಂಜುನಾಥ್ ಎಸ್. ‘ಸಂಸದ ಪ್ರಜ್ವಲ್ ರೇವಣ್ಣ ತನ್ನ ಬಳಿಗೆ ಸಹಾಯ ಯಾಚಿಸಿ ಬಂದ ನೂರಾರು ಹೆಣ್ಣುಮಕ್ಕಳನ್ನು, ಅಧಿಕಾರ ಮತ್ತು ಸಾಂದರ್ಭಿಕ ಲಾಭ ಪಡೆದು ಲೈಂಗಿಕವಾಗಿ ಶೋಷಣೆ ಮಾಡಿರುವುದನ್ನು ಖಂಡಿಸಿ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>‘ಪೆನ್ ಡ್ರೈವ್ ಪ್ರಕರಣದ ಕುರಿತು ಪಾರದರ್ಶಕವಾಗಿ ತನಿಖೆ ಆಗಬೇಕು. ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕಾದರೆ ಪ್ರಜ್ವಲ್ ರೇವಣ್ಣ ಕುಟುಂಬದ ಕೃಪಾಕಟಾಕ್ಷದಿಂದ ಹಾಸನ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಆ ಕುಟುಂಬದ ಋಣದಲ್ಲಿರುವುದಾಗಿ ಭಾವಿಸಿರುವ ಹಲವಾರು ನೌಕರರು ಹಾಗೂ ಅಧಿಕಾರಿಗಳನ್ನು ಈ ಪ್ರಕರಣದ ತನಿಖೆ ಮುಗಿಯುವವರೆಗೆ ಬೇರೆ ಜಿಲ್ಲೆಗೆ ವರ್ಗಾಯಿಸಬೇಕು’ ಎಂದು ಆಗ್ರಹಿಸಿದರು.</p>.<p>ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳು ಕೇವಲ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿವೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>