<p><strong>ಬೆಂಗಳೂರು</strong>: ಬಿಬಿಎಂಪಿ ನೌಕರರ ಕನ್ನಡ ಸಂಘವು ಪಾಲಿಕೆಯ ಕೇಂದ್ರ ಕಛೇರಿ ಆವರಣದಲ್ಲಿ ರಾಜಕುಮಾರ್ ಅವರ ಪ್ರತಿಮೆಯ ಪಕ್ಕದಲ್ಲಿ ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆ ಸ್ಥಾಪಿಸುವಂತೆ ಮನವಿ ಮಾಡಿದೆ.</p>.<p>ಸಂಘವು ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್ ಅವರಿಗೂ ನುಡಿ ನಮನ ಸಲ್ಲಿಸಲಾಯಿತು.</p>.<p>ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ರಾಜಕುಮಾರ್ ಪ್ರತಿಮೆಗೆ ಮತ್ತು ಪುನೀತ್ ರಾಜಕುಮಾರ್ ಅವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.</p>.<p>ಗೌರವ್ ಗುಪ್ತ ಮಾತನಾಡಿ, ‘ಯುವಕರ ಆಶಾಕಿರಣವಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲುವಿಕೆ ದುಃಖಕರ ಸಂಗತಿ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಅವರು ನೀಡಿದ್ದರು. ಬಿಬಿಎಂಪಿ ಕೇಂದ್ರ ಕಚೇರಿ ಅವರಣದಲ್ಲಿರುವ ರಾಜಕುಮಾರ್ ಅವರ ಪ್ರತಿಮೆ ಪಕ್ಕದಲ್ಲಿ ಪುನೀತ್ ಅವರ ಕಂಚಿನ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುವುದು’ ಎಂದರು.</p>.<p>ಬಿಬಿಎಂಪಿ ನೌಕರರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್, ‘ಬಿಬಿಎಂಪಿ ಅನುಮತಿ ನೀಡಿದ್ದೇ ಆದರೆ, ಎರಡು ತಿಂಗಳಲ್ಲಿ ರಾಜಕುಮಾರ್ ಕುಟುಂಬಸ್ಥರಿಂದಲೇ ಪುನೀತ್ ಅವರ ಪ್ರತಿಮೆ ಅನಾವರಣ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿ ನೌಕರರ ಕನ್ನಡ ಸಂಘವು ಪಾಲಿಕೆಯ ಕೇಂದ್ರ ಕಛೇರಿ ಆವರಣದಲ್ಲಿ ರಾಜಕುಮಾರ್ ಅವರ ಪ್ರತಿಮೆಯ ಪಕ್ಕದಲ್ಲಿ ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆ ಸ್ಥಾಪಿಸುವಂತೆ ಮನವಿ ಮಾಡಿದೆ.</p>.<p>ಸಂಘವು ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್ ಅವರಿಗೂ ನುಡಿ ನಮನ ಸಲ್ಲಿಸಲಾಯಿತು.</p>.<p>ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ರಾಜಕುಮಾರ್ ಪ್ರತಿಮೆಗೆ ಮತ್ತು ಪುನೀತ್ ರಾಜಕುಮಾರ್ ಅವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.</p>.<p>ಗೌರವ್ ಗುಪ್ತ ಮಾತನಾಡಿ, ‘ಯುವಕರ ಆಶಾಕಿರಣವಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲುವಿಕೆ ದುಃಖಕರ ಸಂಗತಿ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಅವರು ನೀಡಿದ್ದರು. ಬಿಬಿಎಂಪಿ ಕೇಂದ್ರ ಕಚೇರಿ ಅವರಣದಲ್ಲಿರುವ ರಾಜಕುಮಾರ್ ಅವರ ಪ್ರತಿಮೆ ಪಕ್ಕದಲ್ಲಿ ಪುನೀತ್ ಅವರ ಕಂಚಿನ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುವುದು’ ಎಂದರು.</p>.<p>ಬಿಬಿಎಂಪಿ ನೌಕರರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್, ‘ಬಿಬಿಎಂಪಿ ಅನುಮತಿ ನೀಡಿದ್ದೇ ಆದರೆ, ಎರಡು ತಿಂಗಳಲ್ಲಿ ರಾಜಕುಮಾರ್ ಕುಟುಂಬಸ್ಥರಿಂದಲೇ ಪುನೀತ್ ಅವರ ಪ್ರತಿಮೆ ಅನಾವರಣ ಮಾಡಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>