‘ಹವ್ಯಕರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಸಮಾಜಕ್ಕೆ ವಿಶಿಷ್ಠ ಕೊಡುಗೆಗಳನ್ನು ನೀಡುತ್ತಿದ್ದಾರೆ. ಹವ್ಯಕರು ಮೂಲತಃ ಕೃಷಿಕರಾದರು ಕೂಡ ತಾವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಪ್ರಾಮಾಣಿಕ ವಾಗಿ ಕೆಲಸ ಮಾಡಿ ಸಮಾಜದಲ್ಲಿ ಗೌರವಯುತವಾದ ಬದುಕು ಸಾಗಿಸುತ್ತಿದ್ದಾರೆ. ದಿವಂಗತ ರಾಮಕೃಷ್ಣ ಹೆಗಡೆ, ದತ್ತಾತ್ರೇಯ ಹೊಸಬಾಳೆ, ವಿಶ್ವೇಶ್ವರ ಹೆಗಡೆ ಕಾಗೇರಿ ಹೀಗೆ ಅನೇಕರ ಸಾಧನೆ ನಮಗೆ ಪ್ರೇರಣೆ. ಅವರು ನಮಗೆ ದಾರಿ ದೀಪವಾಗಿದ್ದಾರೆ’ ಎಂದು ತಿಳಿಸಿದರು.