ಆಸ್ಪತ್ರೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿ ಎಂ.ಎಸ್. ಮನೀಶಾ ಕುಮಾರ್, ‘ದೇಶವು ಕ್ಯಾನ್ಸರ್ ಆರೈಕೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಕ್ಯಾನ್ಸರ್ ಕಾಯಿಲೆ ಎದುರಿಸಲು ಮಾನಸಿಕ ಶಕ್ತಿಯೂ ಅಗತ್ಯ. ಬೇಗ ಆಸ್ಪತ್ರೆಗಳಿಗೆ ತೆರಳಿ, ತಪಾಸಣೆ ಮಾಡಿಸಿಕೊಂಡಲ್ಲಿ ಜೀವಕ್ಕೆ ಅಪಾಯವಾಗುವುದನ್ನು ತಪ್ಪಿಸಬಹುದು. ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ಕಾಯಿಲೆಯನ್ನು ವಾಸಿ ಮಾಡಲು ಸಾಧ್ಯ’ ಎಂದು ಹೇಳಿದರು.