ಅನರ್ಹ ಶಾಸಕರ ಕುರಿತು ಯಡಿಯೂರಪ್ಪ ಮಾತನಾಡಿರುವ ಆಡಿಯೊ ಕುರಿತು, ‘ಈ ಸಂಬಂಧ ಕಾಂಗ್ರೆಸ್ನವರು ರಾಜ್ಯಪಾಲರಿಗೆ ಈಗಾಗಲೇ ದೂರು ನೀಡಿದ್ದಾರೆ. ರಾಷ್ಟ್ರಪತಿಗೂ ದೂರು ನೀಡುವುದಾಗಿ ಹೇಳುತ್ತಿದ್ದಾರೆ. ಆಡಿಯೊ ವಿಚಾರ ಈಗಾಗಲೇ ಪ್ರಧಾನಿ ಹಾಗೂ ರಾಷ್ಟ್ರಪತಿಗೂ ಗೊತ್ತಿದೆ. ಆದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಒಂದೇ ಮಾನದಂಡ ಅನುಸರಿಸಬೇಕು. ಆದರೆ, ಇಲ್ಲಿ ಏನು ಮಾಡುತ್ತಾರೆ ಕಾದು ನೋಡಬೇಕಿದೆ’ ಎಂದರು.