<p><strong>ಬೆಂಗಳೂರು:</strong> ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆಗೆ ತಡೆ ನೀಡುವಂತೆ ಕೋರಿದ್ದ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಯನ್ನು ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.</p>.<p>‘ನನ್ನ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ನಲ್ಲಿ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು’ ಎಂದು ಕೋರಿ ಎಚ್.ಡಿ. ಕುಮಾರಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯನ್ನು ರಜಾಕಾಲದ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಪಿ.ಜಿ.ಎಂ.ಪಾಟೀಲ ಅವರು ಮಂಗಳವಾರ ವಿಚಾರಣೆ ನಡೆಸಿದರು.</p>.<p>ವಿಚಾರಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ಹಿರಿಯ ವಕೀಲ ಹಷ್ಮತ್ ಪಾಷಾ ಅವರು, ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡುವಂತೆ ಕೋರಿದರು.</p>.<p>ಇದೇ ವೇಳೆ, ಲೋಕಾಯುಕ್ತ ಪರ ವಕೀಲರಾದ ವೆಂಕಟೇಶ್ ಎಸ್.ಅರಬಟ್ಟಿ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು.</p>.<p>ಅರ್ಜಿದಾರರ ಕೋರಿಕೆಯನ್ನು ನಿರಾಕರಿಸಿದ ನ್ಯಾಯಮೂರ್ತಿಗಳು, ಆರೋಪಿ ಕುಮಾರಸ್ವಾಮಿ ಅವರಿಗೆ ವಿಚಾರಣೆಯ ವೇಳೆ ಖುದ್ದು ಹಾಜರಾತಿಗೆ ನಾಲ್ಕು ವಾರಗಳ ಕಾಲ ವಿನಾಯ್ತಿಯನ್ನು ನೀಡಿ, ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಿದರು.</p>.<p>ಈ ಹಿಂದಿನ ವಿಚಾರಣೆ ವೇಳೆ ಹೈಕೋರ್ಟ್, ಪ್ರಕರಣದ ಪ್ರತಿವಾದಿಗಳಾದ ಲೋಕಾಯುಕ್ತ ಪೊಲೀಸರು ಮತ್ತು ಪ್ರಕರಣದ ದೂರದಾರರಾದ ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿಯ ಮಾಹಿತಿ ಹಕ್ಕು ಕಾರ್ಯಕರ್ತ ಎಂ.ಎಸ್.ಮಹದೇವ ಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತ್ತು.</p>.<p><strong>ಪ್ರಕರಣವೇನು?</strong></p>.<p>‘2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ, ನಗರದ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿ ವ್ಯಾಪ್ತಿಯಲ್ಲಿ 3 ಎಕರೆ 34 ಗುಂಟೆ ಪ್ರದೇಶವನ್ನು ಸರ್ಕಾರದ ಸ್ವಾಧೀನದಿಂದ ಕೈಬಿಟ್ಟು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ’ ಎಂದು ಆರೋಪಿಸಲಾದ ಪ್ರಕರಣ ಇದಾಗಿದೆ.</p>.<p>ಏಳು ವರ್ಷ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, 2019ರ ಜನವರಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ‘ ರಿಪೋರ್ಟ್ ಸಲ್ಲಿಸಿದ್ದರು.</p>.<p>ಇದನ್ನು ಆಕ್ಷೇಪಿಸಿ ದೂರುದಾರ ಮಹದೇವ ಸ್ವಾಮಿ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯನ್ನು ‘ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಪುರಸ್ಕರಿಸಿದ್ದರು.</p>.<p>'ಬಿ‘ ರಿಪೋರ್ಟ್ ರದ್ದುಪಡಿಸಿ 2019 ಅಕ್ಟೋಬರ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಪ್ರಕರಣದ ಒಟ್ಟು 19 ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆಗೆ ತಡೆ ನೀಡುವಂತೆ ಕೋರಿದ್ದ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರ ಮನವಿಯನ್ನು ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.</p>.<p>‘ನನ್ನ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ನಲ್ಲಿ ನಡೆಯುತ್ತಿರುವ ಕ್ರಿಮಿನಲ್ ಪ್ರಕರಣದ ವಿಚಾರಣೆ ರದ್ದುಗೊಳಿಸಬೇಕು’ ಎಂದು ಕೋರಿ ಎಚ್.ಡಿ. ಕುಮಾರಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯನ್ನು ರಜಾಕಾಲದ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಪಿ.ಜಿ.ಎಂ.ಪಾಟೀಲ ಅವರು ಮಂಗಳವಾರ ವಿಚಾರಣೆ ನಡೆಸಿದರು.</p>.<p>ವಿಚಾರಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ಹಿರಿಯ ವಕೀಲ ಹಷ್ಮತ್ ಪಾಷಾ ಅವರು, ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡುವಂತೆ ಕೋರಿದರು.</p>.<p>ಇದೇ ವೇಳೆ, ಲೋಕಾಯುಕ್ತ ಪರ ವಕೀಲರಾದ ವೆಂಕಟೇಶ್ ಎಸ್.ಅರಬಟ್ಟಿ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು.</p>.<p>ಅರ್ಜಿದಾರರ ಕೋರಿಕೆಯನ್ನು ನಿರಾಕರಿಸಿದ ನ್ಯಾಯಮೂರ್ತಿಗಳು, ಆರೋಪಿ ಕುಮಾರಸ್ವಾಮಿ ಅವರಿಗೆ ವಿಚಾರಣೆಯ ವೇಳೆ ಖುದ್ದು ಹಾಜರಾತಿಗೆ ನಾಲ್ಕು ವಾರಗಳ ಕಾಲ ವಿನಾಯ್ತಿಯನ್ನು ನೀಡಿ, ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಿದರು.</p>.<p>ಈ ಹಿಂದಿನ ವಿಚಾರಣೆ ವೇಳೆ ಹೈಕೋರ್ಟ್, ಪ್ರಕರಣದ ಪ್ರತಿವಾದಿಗಳಾದ ಲೋಕಾಯುಕ್ತ ಪೊಲೀಸರು ಮತ್ತು ಪ್ರಕರಣದ ದೂರದಾರರಾದ ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿಯ ಮಾಹಿತಿ ಹಕ್ಕು ಕಾರ್ಯಕರ್ತ ಎಂ.ಎಸ್.ಮಹದೇವ ಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತ್ತು.</p>.<p><strong>ಪ್ರಕರಣವೇನು?</strong></p>.<p>‘2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ, ನಗರದ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿ ವ್ಯಾಪ್ತಿಯಲ್ಲಿ 3 ಎಕರೆ 34 ಗುಂಟೆ ಪ್ರದೇಶವನ್ನು ಸರ್ಕಾರದ ಸ್ವಾಧೀನದಿಂದ ಕೈಬಿಟ್ಟು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ’ ಎಂದು ಆರೋಪಿಸಲಾದ ಪ್ರಕರಣ ಇದಾಗಿದೆ.</p>.<p>ಏಳು ವರ್ಷ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, 2019ರ ಜನವರಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ‘ ರಿಪೋರ್ಟ್ ಸಲ್ಲಿಸಿದ್ದರು.</p>.<p>ಇದನ್ನು ಆಕ್ಷೇಪಿಸಿ ದೂರುದಾರ ಮಹದೇವ ಸ್ವಾಮಿ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯನ್ನು ‘ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಪುರಸ್ಕರಿಸಿದ್ದರು.</p>.<p>'ಬಿ‘ ರಿಪೋರ್ಟ್ ರದ್ದುಪಡಿಸಿ 2019 ಅಕ್ಟೋಬರ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಪ್ರಕರಣದ ಒಟ್ಟು 19 ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>