‘ಬಿಜೆಪಿ ಸರ್ಕಾರ ಉಳಿಸುತ್ತೇನೆ ಅಥವಾ ಕಾಪಾಡುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಸರ್ಕಾರ ಕಾಪಾಡುತ್ತೇನೆ ಎಂದು ಹೇಳಿದ್ದೇನೆ, ಯಾವ ಸರ್ಕಾರ ಎಂಬುದನ್ನು ತಿಳಿಸಿಲ್ಲ. ಯಾವ ಸರ್ಕಾರ ಎನ್ನುವುದನ್ನು ಡಿ. 9ರ ಬಳಿಕ ತಿಳಿಸುತ್ತೇನೆ. ಇದರ ಸೂಕ್ಷ್ಮತೆ ಬಲ್ಲವರಿಗೆ ಮಾತ್ರ ಅರ್ಥವಾಗುತ್ತದೆ ಸಚಿವ ಆರ್.ಅಶೋಕ್ ಅವರಿಗೆ ಇವೆಲ್ಲ ಅರ್ಥವಾಗುವುದಿಲ್ಲ. ಇವರು ಪಾಠ ಕಲಿಯೋದು ಬಹಳಷ್ಟಿದೆ’ ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.