ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ರಾಕೇಶ್ ಸಾವಿನ ವಿಚಾರವನ್ನು ಈಗ ಪ್ರಸ್ತಾಪಿಸುವುದು ಬೇಡ. ಅಲ್ಲಿ ಏನು ನಡೆದಿತ್ತು ಎಂಬುದು ಯಾರಿಗೆ ಗೊತ್ತು? ಆ ವಿಚಾರ ಮಾತನಾಡಿ ಯಾರನ್ನೂ ನೋಯಿಸುವುದು ಬೇಡ. ನಮಗೂ ಮಾತನಾಡಲು ಸಾವಿರ ವಿಚಾರಗಳಿವೆ ಎಂದರು.
'ದೇವೇಗೌಡರೇ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದಾರೆ' ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಕೇಳಿದಾಗ, 'ಮುಖ್ಯಮಂತ್ರಿಯವರಿಗೆ ಎಲ್ಲ ಮಾಹಿತಿಯೂ ಇರುತ್ತದೆ. ಸುಳ್ಳು ಎಂದು ನಿರಾಕರಿಸಲು ಸಾಧ್ಯವಿಲ್ಲ' ಎಂದು ಹೇಳಿದರು.