ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಳಿ ಹಿಂಡುವವರ ನಾಟಕ ಫಲಿಸದು: ಎಚ್‌ಡಿಕೆ

Last Updated 30 ಜುಲೈ 2020, 20:12 IST
ಅಕ್ಷರ ಗಾತ್ರ

ಬೆಂಗಳೂರು:‘ತನ್ನ ಬೇಳೆ ಬೇಯಿಸಿಕೊಳ್ಳಲು ಮಸಾಲೆ ಅರೆಯುತ್ತಿರುವ ವ್ಯಕ್ತಿಯ ಕುತಂತ್ರ ರಾಜಕಾರಣಕ್ಕೆ ರಾಮನಗರ ಜಿಲ್ಲೆಯ ಜನರು ಸೊಪ್ಪು ಹಾಕುವುದಿಲ್ಲ. ಹುಳಿ ಹಿಂಡುವವರ ನಾಟಕ ಫಲಿಸದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

‘ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರಕ್ಕೆ ಪರೋಕ್ಷ ಬೆಂಬಲ ನೀಡಿದ್ದಾರೆ’ ಎಂಬ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ನೆರೆಹಾವಳಿ, ಕೊರೊನಾ ಕಾಲದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಜನರ ಹಿತಕಾಯುವ ದೃಷ್ಟಿಯಿಂದ ಸರ್ಕಾರಕ್ಕೆ ಬೆಂಬಲ ಇದೆ ಎಂದಾಕ್ಷಣ ಅದನ್ನು ತಮ್ಮ ಮೂಗಿನ ನೇರಕ್ಕೆ ವ್ಯಾಖ್ಯಾನಿಸುವ ಕೀಳು ಅಭಿರುಚಿಯ ಹೇಳಿಕೆ ನೀಡುವುದು ಯಾರಿಗೂ ಶೋಭೆ ತರುವುದಿಲ್ಲ’ ಎಂದಿದ್ದಾರೆ.

‘ನಾನು ಹೊಂದಾಣಿಕೆ ರಾಜಕಾರಣವನ್ನು ಹಿಂದೆಯೂ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವಣ ರಾಜಕಾರಣವೇ ಬೇರೆ. ವೈಯಕ್ತಿಕ ವಿಶ್ವಾಸವೇ ಬೇರೆ. ಹಿಂಬಾಗಿಲ ರಾಜಕಾರಣದ ಮೂಲಕ ನೆಲೆ ಕಂಡುಕೊಂಡವರಿಂದ ಯಾವುದೇ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ’ ಎಂದು ಅವರು ಕುಟುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT