<p><strong>ಬೆಂಗಳೂರು</strong>: ‘ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸದೇ ಕೆರೆಗಳನ್ನು ನುಂಗಲು ಆಸ್ಥೆ ವಹಿಸಿದ್ದೇ ಇಂದಿನ ಸಮಸ್ಯೆಗಳಿಗೆ ಕಾರಣ’ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಮಳೆಹಾನಿಗೆ ತುತ್ತಾಗಿರುವ ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇಔಟ್, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕೆಲವೆಡೆ, ಹೆಚ್ಚು ಹಾನಿಯಾಗಿರುವ ಹೊರಮಾವು ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.</p>.<p>‘ಕೆರೆ ನುಂಗಿರುವುದು ದೊಡ್ಡ ತಪ್ಪು. ರಾಜಕಾಲುವೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಒಳಚರಂಡಿ ಸ್ಥಳಗಳನ್ನು ಒತ್ತುವರಿ ಮಾಡಲಾಗಿದೆ. ತ್ಯಾಜ್ಯ ಸುರಿದು ಕೆರೆ ಮುಚ್ಚಿಸುತ್ತಿದ್ದಾರೆ. ಇದು ಸಮಸ್ಯೆಗಳಿಗೆ ಕಾರಣ ಎಂದರು.</p>.<p>ನಗರದ ಪ್ರಮುಖ ರಸ್ತೆಗಳಲ್ಲಿ ಕಂಡುಬರುವ ಚಿತ್ರಣವೇ ಬೇರೆ, ಒಳ ಹೊಕ್ಕು ನೋಡಿ ಚಿತ್ರಣವೇ ಬೇರೆ ಇದೆ.ಅಲಕ್ಷ್ಯಕ್ಕೀಡಾಗಿರುವ ಕಡೆ ಮೂಲಸೌಕರ್ಯಗಳ ಸಮಸ್ಯೆ ಇದೆ. ಮಳೆ ಬಂದಾಗ ಪರಿಹಾರ ಕೊಡುವುದು ಬಿಟ್ಟರೆ ಶಾಶ್ವತ ಪರಿಹಾರ ಆಗಿಲ್ಲ’ ಎಂದು ಹೇಳಿದರು.</p>.<p>‘ನನ್ನ ಅವಧಿಯಲ್ಲಿ ಹೊರ ವಲಯದ ಪೆರಿಪೆರಲ್ ರಿಂಗ್ ರಸ್ತೆಗೆ ಒಂದು ಸಾವಿರ ಕೋಟಿ ಮೀಸಲಿಟ್ಟಿದ್ದೆ. ಇದುವರೆಗೂ ಒಂದೇ ಒಂದು<br />ಕಿ.ಮೀ ರಸ್ತೆ ಅಭಿವೃದ್ಧಿಯು ಮುಂದಕ್ಕೆ ಹೋಗಿಲ್ಲ. ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಮಾದರಿ ನಗರವನ್ನಾಗಿ ಮಾಡುತ್ತೇವೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸದೇ ಕೆರೆಗಳನ್ನು ನುಂಗಲು ಆಸ್ಥೆ ವಹಿಸಿದ್ದೇ ಇಂದಿನ ಸಮಸ್ಯೆಗಳಿಗೆ ಕಾರಣ’ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಮಳೆಹಾನಿಗೆ ತುತ್ತಾಗಿರುವ ರಾಜರಾಜೇಶ್ವರಿ ನಗರ, ಮಹಾಲಕ್ಷ್ಮಿ ಲೇಔಟ್, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕೆಲವೆಡೆ, ಹೆಚ್ಚು ಹಾನಿಯಾಗಿರುವ ಹೊರಮಾವು ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ಅವರು ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.</p>.<p>‘ಕೆರೆ ನುಂಗಿರುವುದು ದೊಡ್ಡ ತಪ್ಪು. ರಾಜಕಾಲುವೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಒಳಚರಂಡಿ ಸ್ಥಳಗಳನ್ನು ಒತ್ತುವರಿ ಮಾಡಲಾಗಿದೆ. ತ್ಯಾಜ್ಯ ಸುರಿದು ಕೆರೆ ಮುಚ್ಚಿಸುತ್ತಿದ್ದಾರೆ. ಇದು ಸಮಸ್ಯೆಗಳಿಗೆ ಕಾರಣ ಎಂದರು.</p>.<p>ನಗರದ ಪ್ರಮುಖ ರಸ್ತೆಗಳಲ್ಲಿ ಕಂಡುಬರುವ ಚಿತ್ರಣವೇ ಬೇರೆ, ಒಳ ಹೊಕ್ಕು ನೋಡಿ ಚಿತ್ರಣವೇ ಬೇರೆ ಇದೆ.ಅಲಕ್ಷ್ಯಕ್ಕೀಡಾಗಿರುವ ಕಡೆ ಮೂಲಸೌಕರ್ಯಗಳ ಸಮಸ್ಯೆ ಇದೆ. ಮಳೆ ಬಂದಾಗ ಪರಿಹಾರ ಕೊಡುವುದು ಬಿಟ್ಟರೆ ಶಾಶ್ವತ ಪರಿಹಾರ ಆಗಿಲ್ಲ’ ಎಂದು ಹೇಳಿದರು.</p>.<p>‘ನನ್ನ ಅವಧಿಯಲ್ಲಿ ಹೊರ ವಲಯದ ಪೆರಿಪೆರಲ್ ರಿಂಗ್ ರಸ್ತೆಗೆ ಒಂದು ಸಾವಿರ ಕೋಟಿ ಮೀಸಲಿಟ್ಟಿದ್ದೆ. ಇದುವರೆಗೂ ಒಂದೇ ಒಂದು<br />ಕಿ.ಮೀ ರಸ್ತೆ ಅಭಿವೃದ್ಧಿಯು ಮುಂದಕ್ಕೆ ಹೋಗಿಲ್ಲ. ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಮಾದರಿ ನಗರವನ್ನಾಗಿ ಮಾಡುತ್ತೇವೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>