<p><strong>ಬೆಂಗಳೂರು: </strong>‘ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅದನ್ನು ಬಗೆಹರಿಸುವುದನ್ನು ಬಿಟ್ಟು ಕೇಂದ್ರ ಸರ್ಕಾರ ಹೊಸ ಸಮಸ್ಯೆಯನ್ನು ಹುಟ್ಟುಹಾಕುತ್ತಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.</p>.<p>ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಪೌರತ್ವ ತಿದ್ದುಪಡಿ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಮಸೂದೆಗಳನ್ನು ಸದನಗಳಲ್ಲಿ ಮಂಡಿಸಿದಾಗ ಅನೇಕ ರಾಜ್ಯಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹಿಂದೂ ರಾಷ್ಟ್ರ ಮಾಡುತ್ತಿದ್ದೇವೆ ಎನ್ನುವ ಭಾವನೆ ಜನರ ಮನಸ್ಸಿನಲ್ಲಿ ಬರಬೇಕು ಎಂದು ಬಿಜೆಪಿ ಈ ರೀತಿ ವಿವಾದ ಸೃಷ್ಟಿಸುತ್ತಿದೆ’ ಎಂದು ದೂರಿದರು.</p>.<p>‘ನಮ್ಮ ದೇಶಕ್ಕೆ ಅದರದ್ದೆ ಆದ ಇತಿಹಾಸವಿದೆ. ಬಹುಧರ್ಮಗಳ ದೇಶ ಎಂಬುದನ್ನು ಗಮನದಲ್ಲಿಟ್ಟುಕೊಂಡೇ ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ. ನಾನು ಸಾವರ್ಕರ್ ಬಗ್ಗೆ ಮಾತನಾಡಲ್ಲ. ಏಕೆಂದರೆ, ಆಗ ನಾನು ಹುಟ್ಟಿರಲಿಲ್ಲ‘ ಎಂದು ಹೇಳಿದರು.</p>.<p>‘ವಲಸೆ ಎನ್ನುವುದು ಕೇವಲ ಭಾರತದ ಸಮಸ್ಯೆಯಲ್ಲ. ವಿಶ್ವದೆಲ್ಲೆಡೆ ಈ ಸಮಸ್ಯೆ ಇದೆ. ದೇಶದಲ್ಲಿರುವ ಪ್ರತಿಯೊಬ್ಬ ನಾಗರೀಕನ ರಕ್ಷಣೆ ಸರ್ಕಾರದ ಕರ್ತವ್ಯ’ ಎಂದರು.</p>.<p>‘ರಾಜ್ಯದಲ್ಲಿ ಜನವರಿಯಿಂದಲೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಯಡಿಯೂರಪ್ಪ ಅವರು ಹೇಳುತ್ತಿದ್ದಾರೆ. ಕಾಯ್ದೆ ಜಾರಿಗೆ ಇನ್ನೂ ಯೋಚಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಅವರು ಏಕೆ ಮಾಡುತ್ತಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>‘ಸಿಎಎ ಮತ್ತು ಎನ್ಆರ್ಸಿ ದೇಶದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಹಾಗಾಗಿ ನಮ್ಮ ಪಕ್ಷ ಅವುಗಳ ಜಾರಿಯನ್ನು ಖಂಡಿಸುತ್ತದೆ‘ ಎಂದರು.</p>.<p>ಪ್ರತಿ ರಾಜ್ಯದಲ್ಲೂ ಭಿನ್ನ ಸಮಸ್ಯೆಗಳಿರುತ್ತವೆ. ಅಸ್ಸಾಂನ ಸಮಸ್ಯೆಯೇ ಬೇರೆ, ತ್ರಿಪುರದ ಮೂಲ ನಿವಾಸಿಗಳ ಸಮಸ್ಯೆಯೇ ಬೇರೆ. ಅಂತಹ ಸಮಸ್ಯೆಗಳಿಗೆ ಪರಿಹಾರ ನೀಡುವುದನ್ನು ಬಿಟ್ಟು, ಕೇಂದ್ರ ಸರ್ಕಾರ ಅನಗತ್ಯ ವಿಚಾರಕ್ಕೆ ಹೆಚ್ಚು ಮಹತ್ವ ನೀಡುತ್ತಿದೆ’ ಎಂದು ತಿಳಿಸಿದರು.</p>.<p><strong>ಚುನಾವಣೆಯಲ್ಲಿ ಸೋಲು ಗೆಲವು ಸಹಜ</strong></p>.<p>‘ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲುವು ಸಾಧಿಸುವುದು ಸಹಜ. ಕಳೆದ ಬಾರಿ ಗುಂಡ್ಲುಪೇಟೆ , ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದಿದ್ದಿತ್ತು. ಆದಾದ ನಂತರದ ಚುನಾವಾಣೆಯಲ್ಲಿ ಎರಡೂ ಕಡೆ ಕಾಂಗ್ರೆಸ್ಗೆ ಸೋಲಾಯಿತು’ ಎಂದು ನೆನಪಿಸಿಕೊಂಡರು.</p>.<p>‘ಸುಭದ್ರ ಸರ್ಕಾರ ಬಯಸಿ ಜನ ಬಿಜೆಪಿಗೆ ಮತ ನೀಡಿದ್ದಾರೆ. ಈಗ ಬಿಜೆಪಿಯವರು ಗೆದ್ದಿದ್ದಾರೆ. ಮುಂದೆ ಯಾರು ಗೆಲ್ಲುತ್ತಾರೊ ನೋಡಬೇಕು. ಕಮಲ ಇಂದು ಅರಳಿದೆ ಮುಂದೆ ಮುದುಡಬಹುದು. ಇದು ನಡಿತಾ ಇರುತ್ತೆ’ ಎಂದು ಹೇಳಿದರು.</p>.<p><strong>ಏನಾದ್ರು ಹೆಸರಿಡಲಿ</strong></p>.<p>‘ಕ್ಯಾಂಟೀನ್ಗೆ ಇಂದಿರಾ ಅಂತಾದ್ರು ಇಡಲಿ, ವಾಜಪೇಯಿ ಅಂತಾದ್ರು ಹೆಸರಿಡಲಿ. ಅದರ ಬಗ್ಗೆ ನಾನು ತಲೆ ಕೇಡಿಸಿಕೊಳ್ಳೊದಿಲ್ಲ. ರಾಜ್ಯದಲ್ಲಿ ಅನೇಕ ಕಡೆ ಕಬ್ಬು ಕಟಾವು ಮಾಡದೆ ಒಣಗುತ್ತಿದೆ. ಅದರ ಬಗ್ಗೆ ಚರ್ಚೆ ಮಾಡಿ. ಹೆಸರಿನ ವಿಚಾರಕ್ಕೆ ನಾನು ರಾಜಕೀಯ ಮಾಡುವುದಿಲ್ಲ’ ಎಂದರು.</p>.<p>‘ನನಗೆ ಜನರು ವಿಶ್ರಾಂತಿ ಕೊಟ್ಟಿದ್ದಾರೆ. ಪುಸ್ತಕ ಓದೋಕೆ ಸಮಯ ಕೊಟ್ಟಿದ್ದಾರೆ. ಯಾವ ಶಾಸಕರು ಜೆಡಿಎಸ್ ತೊರೆಯುವುದಿಲ್ಲ. ನನ್ನ ಷಷ್ಠಿ ಪೂಜೆಗೆ ಜಿ.ಟಿ. ದೇವೇಗೌಡರು ಬಿಟ್ಟು ಎಲ್ಲರೂ ಬಂದಿದ್ದಾರೆ’ ಎಂದು ಹೇಳಿದರು.</p>.<p>‘ಬಿಜೆಪಿ ಸರ್ಕಾರ ಸುಭದ್ರವಾಗಿರಲಿ ಎಂದು ನಾನೂ ಆಸೆ ಪಡುತ್ತೀನಿ. ನಾನಂತೂ ಯಾವುದೇ ಶಾಸರಕನ್ನು ಖರೀದಿ ಮಾಡಿ ಸರ್ಕಾರಕ್ಕೆ ತೊಂದರೆ ಕೊಡುವುದಿಲ್ಲ. ಆಪರೇಷನ್ ಏನಿದ್ದರೂ ಬಿಜೆಪಿಯವರ ಸಂಸ್ಕೃತಿ, ಅವರೇ ಅದನ್ನು ಮಾಡಲಿ’ ಎಂದು ಟಾಂಗ್ ನೀಡಿದರು.</p>.<p><strong>ಜಿ.ಟಿ ದೇವೇಗೌಡಗೆ ಕುಮಾರಸ್ವಾಮಿ ಟೀಕೆ</strong></p>.<p>‘ಪಕ್ಷದ ಬಗ್ಗೆ ಕೆಲವರು ಕೆಟ್ಟದಾಗಿ ಮಾತನಾಡುತ್ತಾರೆ. ಪಕ್ಷದಿಂದ ಅವರು ಏನೂ ಸಹಾಯ ತೆಗೆದುಕೊಂಡಿಲ್ಲ ಎಂದು ಅವರು ಹೇಳಲಿ. ನನ್ನಿಂದ ಅವರಿಗೆ ಸ್ವಲ್ಪವೂ ಅನುಕೂಲ ಆಗಿಲ್ಲವೇ?’ ಎಂದು ಟೀಕಿಸಿದರು.</p>.<p>ನೂತನ ಶಾಸಕರು ಸಿದ್ದರಾಮಯ್ಯ ಭೇಟಿ ಮಾಡಿದ್ದರ ಬಗ್ಗೆ ಮಾತನಾಡಿದ ಅವರು, ’ಆಸ್ಪತ್ರೆಗೆ ಹೋಗಿ ಭೇಟಿ ಮಾಡಿ ನೀವೆ ನಮ್ಮ ಗುರುಗಳು ಅಂತಾ ಹೇಳುತ್ತಾರೆ. ಅವರೇ, ಟೋಪಿ ಹಾಕಿ ಹೊಗಿದ್ದು ಗೊತ್ತಿಲ್ವೆ..?’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅದನ್ನು ಬಗೆಹರಿಸುವುದನ್ನು ಬಿಟ್ಟು ಕೇಂದ್ರ ಸರ್ಕಾರ ಹೊಸ ಸಮಸ್ಯೆಯನ್ನು ಹುಟ್ಟುಹಾಕುತ್ತಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.</p>.<p>ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಪೌರತ್ವ ತಿದ್ದುಪಡಿ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಮಸೂದೆಗಳನ್ನು ಸದನಗಳಲ್ಲಿ ಮಂಡಿಸಿದಾಗ ಅನೇಕ ರಾಜ್ಯಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹಿಂದೂ ರಾಷ್ಟ್ರ ಮಾಡುತ್ತಿದ್ದೇವೆ ಎನ್ನುವ ಭಾವನೆ ಜನರ ಮನಸ್ಸಿನಲ್ಲಿ ಬರಬೇಕು ಎಂದು ಬಿಜೆಪಿ ಈ ರೀತಿ ವಿವಾದ ಸೃಷ್ಟಿಸುತ್ತಿದೆ’ ಎಂದು ದೂರಿದರು.</p>.<p>‘ನಮ್ಮ ದೇಶಕ್ಕೆ ಅದರದ್ದೆ ಆದ ಇತಿಹಾಸವಿದೆ. ಬಹುಧರ್ಮಗಳ ದೇಶ ಎಂಬುದನ್ನು ಗಮನದಲ್ಲಿಟ್ಟುಕೊಂಡೇ ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ. ನಾನು ಸಾವರ್ಕರ್ ಬಗ್ಗೆ ಮಾತನಾಡಲ್ಲ. ಏಕೆಂದರೆ, ಆಗ ನಾನು ಹುಟ್ಟಿರಲಿಲ್ಲ‘ ಎಂದು ಹೇಳಿದರು.</p>.<p>‘ವಲಸೆ ಎನ್ನುವುದು ಕೇವಲ ಭಾರತದ ಸಮಸ್ಯೆಯಲ್ಲ. ವಿಶ್ವದೆಲ್ಲೆಡೆ ಈ ಸಮಸ್ಯೆ ಇದೆ. ದೇಶದಲ್ಲಿರುವ ಪ್ರತಿಯೊಬ್ಬ ನಾಗರೀಕನ ರಕ್ಷಣೆ ಸರ್ಕಾರದ ಕರ್ತವ್ಯ’ ಎಂದರು.</p>.<p>‘ರಾಜ್ಯದಲ್ಲಿ ಜನವರಿಯಿಂದಲೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಯಡಿಯೂರಪ್ಪ ಅವರು ಹೇಳುತ್ತಿದ್ದಾರೆ. ಕಾಯ್ದೆ ಜಾರಿಗೆ ಇನ್ನೂ ಯೋಚಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಅವರು ಏಕೆ ಮಾಡುತ್ತಿದ್ದಾರೆ’ ಎಂದು ಪ್ರಶ್ನಿಸಿದರು.</p>.<p>‘ಸಿಎಎ ಮತ್ತು ಎನ್ಆರ್ಸಿ ದೇಶದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಹಾಗಾಗಿ ನಮ್ಮ ಪಕ್ಷ ಅವುಗಳ ಜಾರಿಯನ್ನು ಖಂಡಿಸುತ್ತದೆ‘ ಎಂದರು.</p>.<p>ಪ್ರತಿ ರಾಜ್ಯದಲ್ಲೂ ಭಿನ್ನ ಸಮಸ್ಯೆಗಳಿರುತ್ತವೆ. ಅಸ್ಸಾಂನ ಸಮಸ್ಯೆಯೇ ಬೇರೆ, ತ್ರಿಪುರದ ಮೂಲ ನಿವಾಸಿಗಳ ಸಮಸ್ಯೆಯೇ ಬೇರೆ. ಅಂತಹ ಸಮಸ್ಯೆಗಳಿಗೆ ಪರಿಹಾರ ನೀಡುವುದನ್ನು ಬಿಟ್ಟು, ಕೇಂದ್ರ ಸರ್ಕಾರ ಅನಗತ್ಯ ವಿಚಾರಕ್ಕೆ ಹೆಚ್ಚು ಮಹತ್ವ ನೀಡುತ್ತಿದೆ’ ಎಂದು ತಿಳಿಸಿದರು.</p>.<p><strong>ಚುನಾವಣೆಯಲ್ಲಿ ಸೋಲು ಗೆಲವು ಸಹಜ</strong></p>.<p>‘ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲುವು ಸಾಧಿಸುವುದು ಸಹಜ. ಕಳೆದ ಬಾರಿ ಗುಂಡ್ಲುಪೇಟೆ , ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದಿದ್ದಿತ್ತು. ಆದಾದ ನಂತರದ ಚುನಾವಾಣೆಯಲ್ಲಿ ಎರಡೂ ಕಡೆ ಕಾಂಗ್ರೆಸ್ಗೆ ಸೋಲಾಯಿತು’ ಎಂದು ನೆನಪಿಸಿಕೊಂಡರು.</p>.<p>‘ಸುಭದ್ರ ಸರ್ಕಾರ ಬಯಸಿ ಜನ ಬಿಜೆಪಿಗೆ ಮತ ನೀಡಿದ್ದಾರೆ. ಈಗ ಬಿಜೆಪಿಯವರು ಗೆದ್ದಿದ್ದಾರೆ. ಮುಂದೆ ಯಾರು ಗೆಲ್ಲುತ್ತಾರೊ ನೋಡಬೇಕು. ಕಮಲ ಇಂದು ಅರಳಿದೆ ಮುಂದೆ ಮುದುಡಬಹುದು. ಇದು ನಡಿತಾ ಇರುತ್ತೆ’ ಎಂದು ಹೇಳಿದರು.</p>.<p><strong>ಏನಾದ್ರು ಹೆಸರಿಡಲಿ</strong></p>.<p>‘ಕ್ಯಾಂಟೀನ್ಗೆ ಇಂದಿರಾ ಅಂತಾದ್ರು ಇಡಲಿ, ವಾಜಪೇಯಿ ಅಂತಾದ್ರು ಹೆಸರಿಡಲಿ. ಅದರ ಬಗ್ಗೆ ನಾನು ತಲೆ ಕೇಡಿಸಿಕೊಳ್ಳೊದಿಲ್ಲ. ರಾಜ್ಯದಲ್ಲಿ ಅನೇಕ ಕಡೆ ಕಬ್ಬು ಕಟಾವು ಮಾಡದೆ ಒಣಗುತ್ತಿದೆ. ಅದರ ಬಗ್ಗೆ ಚರ್ಚೆ ಮಾಡಿ. ಹೆಸರಿನ ವಿಚಾರಕ್ಕೆ ನಾನು ರಾಜಕೀಯ ಮಾಡುವುದಿಲ್ಲ’ ಎಂದರು.</p>.<p>‘ನನಗೆ ಜನರು ವಿಶ್ರಾಂತಿ ಕೊಟ್ಟಿದ್ದಾರೆ. ಪುಸ್ತಕ ಓದೋಕೆ ಸಮಯ ಕೊಟ್ಟಿದ್ದಾರೆ. ಯಾವ ಶಾಸಕರು ಜೆಡಿಎಸ್ ತೊರೆಯುವುದಿಲ್ಲ. ನನ್ನ ಷಷ್ಠಿ ಪೂಜೆಗೆ ಜಿ.ಟಿ. ದೇವೇಗೌಡರು ಬಿಟ್ಟು ಎಲ್ಲರೂ ಬಂದಿದ್ದಾರೆ’ ಎಂದು ಹೇಳಿದರು.</p>.<p>‘ಬಿಜೆಪಿ ಸರ್ಕಾರ ಸುಭದ್ರವಾಗಿರಲಿ ಎಂದು ನಾನೂ ಆಸೆ ಪಡುತ್ತೀನಿ. ನಾನಂತೂ ಯಾವುದೇ ಶಾಸರಕನ್ನು ಖರೀದಿ ಮಾಡಿ ಸರ್ಕಾರಕ್ಕೆ ತೊಂದರೆ ಕೊಡುವುದಿಲ್ಲ. ಆಪರೇಷನ್ ಏನಿದ್ದರೂ ಬಿಜೆಪಿಯವರ ಸಂಸ್ಕೃತಿ, ಅವರೇ ಅದನ್ನು ಮಾಡಲಿ’ ಎಂದು ಟಾಂಗ್ ನೀಡಿದರು.</p>.<p><strong>ಜಿ.ಟಿ ದೇವೇಗೌಡಗೆ ಕುಮಾರಸ್ವಾಮಿ ಟೀಕೆ</strong></p>.<p>‘ಪಕ್ಷದ ಬಗ್ಗೆ ಕೆಲವರು ಕೆಟ್ಟದಾಗಿ ಮಾತನಾಡುತ್ತಾರೆ. ಪಕ್ಷದಿಂದ ಅವರು ಏನೂ ಸಹಾಯ ತೆಗೆದುಕೊಂಡಿಲ್ಲ ಎಂದು ಅವರು ಹೇಳಲಿ. ನನ್ನಿಂದ ಅವರಿಗೆ ಸ್ವಲ್ಪವೂ ಅನುಕೂಲ ಆಗಿಲ್ಲವೇ?’ ಎಂದು ಟೀಕಿಸಿದರು.</p>.<p>ನೂತನ ಶಾಸಕರು ಸಿದ್ದರಾಮಯ್ಯ ಭೇಟಿ ಮಾಡಿದ್ದರ ಬಗ್ಗೆ ಮಾತನಾಡಿದ ಅವರು, ’ಆಸ್ಪತ್ರೆಗೆ ಹೋಗಿ ಭೇಟಿ ಮಾಡಿ ನೀವೆ ನಮ್ಮ ಗುರುಗಳು ಅಂತಾ ಹೇಳುತ್ತಾರೆ. ಅವರೇ, ಟೋಪಿ ಹಾಕಿ ಹೊಗಿದ್ದು ಗೊತ್ತಿಲ್ವೆ..?’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>