ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸರ್ಕಾರ ಬಹು ದಿನ ಉಳಿಯದು: ಎಚ್‍ಡಿಕೆ

Published 22 ಆಗಸ್ಟ್ 2023, 20:52 IST
Last Updated 22 ಆಗಸ್ಟ್ 2023, 20:52 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ‘ಅಧಿಕಾರದ ದಾಹಕ್ಕಾಗಿ ಕಿತ್ತಾಡಿಕೊಂಡು ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ. ಮುಖ್ಯಮಂತ್ರಿ, ಮಂತ್ರಿ ಸ್ಥಾನಕ್ಕಾಗಿ ಸರ್ಕಾರ ಪತನವಾಗಲಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮಾಗಡಿ ರಸ್ತೆಯ ತಾವರೆಕೆರೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಾಗಿ ಸಿದ್ಧತೆ ಬಗ್ಗೆ ಕರೆದಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಸ್ವತಂತ್ರವಾಗಿ ಕಾಂಗ್ರೆಸ್ ಅಧಿಕಾರ ನಡೆಸುವಂತೆ ನಾಡಿನ ಜನತೆ ಅಧಿಕಾರ ನೀಡಿದ್ದರೂ ಉತ್ತಮ ಆಡಳಿತ ನೀಡದೆ ವರ್ಗಾವಣೆ ದಂದೆಯಲ್ಲಿ ತೊಡಗಿ ಹಣಲೂಟಿ ಮಾಡಲು ಹೊರಟಿದೆ’ ಎಂದು ದೂರಿದರು.

‘ಹಣ ಲೂಟಿ ಮಾಡಲು ಬಿಜೆಪಿಗೆ ಹೋದ ಎಸ್.ಟಿ. ಸೋಮಶೇಖರ್ ಸೇರಿ ಹಲವು ಬಿಜೆಪಿ ಶಾಸಕರನ್ನು ಮತ್ತೆ ಕಾಂಗ್ರೆಸ್ ಸೇರಿಸಿಕೊಳ್ಳುತ್ತಿದ್ದಾರೆ. ಇವರಿಗೆ ಮಾನ ಮರ್ಯಾದೆ ಇಲ್ಲವೇ’ ಎಂದು ಪ್ರಶ್ನಿಸಿದರು.

‘ಮೂರು ವರ್ಷ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್ ಅಭಿವೃದ್ಧಿ ಮಾಡದೆ, ಕಾಮಗಾರಿ ಹೆಸರಿನಲ್ಲಿ ಲೂಟಿ ಮಾಡಿದ್ದಾರೆ’ ಎಂದು ಆರೋಪಿಸಿದರು.

ಜೆಡಿಎಸ್ ನಾಯಕ ಟಿ.ಎನ್.ಜವರಾಯಿಗೌಡ ಮಾತನಾಡಿ, ‘ಅಭಿವೃದ್ದಿ ಕಾರ್ಯ ಕೈಗೊಳ್ಳದೆಯೇ ಹಣ, ಅಧಿಕಾರಕ್ಕಾಗಿ ಪಕ್ಷ ತ್ಯಜಿಸಲು ಮುಂದಾಗಿರುವ ಎಸ್.ಟಿ.ಸೋಮಶೇಖರ್‌ ಅವರಿಗೆ ತಕ್ಕ ಪಾಠ ಕಲಿಸುವ ಮೂಲಕ ಕ್ಷೇತ್ರದ ಜನ ಸ್ವಾಭಿಮಾನ ಮೆರೆಯಬೇಕು’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT