ಮಾಗಡಿ ರಸ್ತೆಯ ತಾವರೆಕೆರೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಾಗಿ ಸಿದ್ಧತೆ ಬಗ್ಗೆ ಕರೆದಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಸ್ವತಂತ್ರವಾಗಿ ಕಾಂಗ್ರೆಸ್ ಅಧಿಕಾರ ನಡೆಸುವಂತೆ ನಾಡಿನ ಜನತೆ ಅಧಿಕಾರ ನೀಡಿದ್ದರೂ ಉತ್ತಮ ಆಡಳಿತ ನೀಡದೆ ವರ್ಗಾವಣೆ ದಂದೆಯಲ್ಲಿ ತೊಡಗಿ ಹಣಲೂಟಿ ಮಾಡಲು ಹೊರಟಿದೆ’ ಎಂದು ದೂರಿದರು.