<p><strong>ಬೆಂಗಳೂರು:</strong> ಪ್ರಕರಣವೊಂದರಲ್ಲಿ ದೂರುದಾರರನ್ನೇ ಸಾಕ್ಷಿ ಎಂದು ಪರಿಗಣಿಸಲು ₹50,000 ಲಂಚ ಪಡೆಯುತ್ತಿದ್ದ ವೇಳೆ ವಯ್ಯಾಲಿಕಾವಲ್ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ದಯಾನಂದ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>ಕೆಂಗೇರಿ ನಿವಾಸಿ ರಾಘವೇಂದ್ರ ಆರ್. ಅವರು ಗಲಾಟೆ ವಿಚಾರವೊಂದರಲ್ಲಿ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಪ್ರಕರಣದಲ್ಲಿ ರಾಘವೇಂದ್ರ ಅವರನ್ನೇ ಸಾಕ್ಷಿಯಾಗಿ ಪರಿಗಣಿಸಲು ದಯಾನಂದ ಅವರು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.</p>.<p>ಈ ಬಗ್ಗೆ ರಾಘವೇಂದ್ರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಸಾದ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು.</p>.<p>ಅದರಂತೆ ದೂರುದಾರರು ದಯಾನಂದ ಅವರು ತಿಳಿಸಿದ್ದ ಸ್ಥಳಕ್ಕೆ ತೆರಳಿ, ₹50,000 ನೀಡಿದ್ದರು. ಇದೇ ವೇಳೆ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಕರಣವೊಂದರಲ್ಲಿ ದೂರುದಾರರನ್ನೇ ಸಾಕ್ಷಿ ಎಂದು ಪರಿಗಣಿಸಲು ₹50,000 ಲಂಚ ಪಡೆಯುತ್ತಿದ್ದ ವೇಳೆ ವಯ್ಯಾಲಿಕಾವಲ್ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ದಯಾನಂದ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>ಕೆಂಗೇರಿ ನಿವಾಸಿ ರಾಘವೇಂದ್ರ ಆರ್. ಅವರು ಗಲಾಟೆ ವಿಚಾರವೊಂದರಲ್ಲಿ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆ ಪ್ರಕರಣದಲ್ಲಿ ರಾಘವೇಂದ್ರ ಅವರನ್ನೇ ಸಾಕ್ಷಿಯಾಗಿ ಪರಿಗಣಿಸಲು ದಯಾನಂದ ಅವರು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.</p>.<p>ಈ ಬಗ್ಗೆ ರಾಘವೇಂದ್ರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಶಿವಪ್ರಸಾದ್ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ರೂಪಿಸಲಾಗಿತ್ತು.</p>.<p>ಅದರಂತೆ ದೂರುದಾರರು ದಯಾನಂದ ಅವರು ತಿಳಿಸಿದ್ದ ಸ್ಥಳಕ್ಕೆ ತೆರಳಿ, ₹50,000 ನೀಡಿದ್ದರು. ಇದೇ ವೇಳೆ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ. ಹಣವನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>