<p><strong>ನೆಲಮಂಗಲ</strong>: ‘ಸಾಧನೆ ಮಾಡಲು ಅಂಗ ವೈಕಲ್ಯ ಅಡ್ಡಿ ಬರುವುದಿಲ್ಲ. ಸಮಸ್ಯೆಗಳು ಬಂದಾಗ ಧೈರ್ಯದಿಂದ ಎದುರಿಸಬೇಕು’ ಎಂದು ‘ಬೆಳಕು’ ಅಕಾಡೆಮಿ ಅಧ್ಯಕ್ಷೆ ಅಶ್ವಿನಿ ಅಂಗಡಿ ತಿಳಿಸಿದರು.</p>.<p>ತಾಲ್ಲೂಕಿನ ಗೊಲ್ಲಹಳ್ಳಿಯಲ್ಲಿ ಹಿತಚಿಂತನ ಚಾರಿಟೆಬಲ್ ಟ್ರಸ್ಟ್ ವತಿಯಿಂದ ವಿಶ್ವ ತಾಯಂದಿರ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ತನ ಕ್ಯಾನ್ಸರ್ ತಪಾಸಣೆ ಹಾಗೂ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕ್ಯಾನ್ಸರ್ ತಜ್ಞೆ ಪೂವಮ್ಮ ಮಾತನಾಡಿ, ‘ಹೆಣ್ಣು ಮಕ್ಕಳ ಆರೋಗ್ಯ ಕೆಟ್ಟರೆ ಇಡೀ ಕುಟುಂಬದ ವಾತಾವರಣ ಹದಗೆಡುತ್ತದೆ. ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ಇರಲಿ‘ ಎಂದು ಸಲಹೆ ಮಾಡಿದರು.</p>.<p>ಹಿತಚಿಂತನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿ.ರಾಮಸ್ವಾಮಿ ಮಾತನಾಡಿ, ಈಗಾಗಲೇ ಉಚಿತ ಔಷಧಿಗಳನ್ನು ಅಶಕ್ತರಿಗೆ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.</p>.<p>ಶ್ವಾಸಕೋಶ ತಜ್ಞ ಗಣೇಶ್ ಮಾತನಾಡಿ, ನಿತ್ಯ ವ್ಯಾಯಾಮ, ನಿಯಮಿತ ಆಹಾರವೇ ರೋಗಗಳು ಬರದಂತೆ ತಡೆಯುವ ದಿವ್ಯೌಷಧವಾಗಿದೆ ಎಂದರು.</p>.<p>ಇದೇ ವೇಳೆ ಟ್ರಸ್ಟಿ ಪುಟ್ಟಮ್ಮ ₹10 ಲಕ್ಷವನ್ನು ಟ್ರಸ್ಟ್ನ ಸೇವಾ ಕಾರ್ಯಗಳಿಗೆ ನೀಡಿದರು. ₹ 5 ಲಕ್ಷ ಮೌಲ್ಯದ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.</p>.<p>ವಿಸಿಎನ್ಆರ್ ಆಸ್ಪತ್ರೆಯ ವಿನಯ್, ಮೂಳೆತಜ್ಞ ಅರುಣ್, ಸ್ತ್ರೀರೋಗ ತಜ್ಞೆ ನೇಹಾ, ನೇತ್ರ ತಜ್ಞೆ ಮಾನಸಾ, ಸಾಯಿದತ್ತ ಆರೋಗ್ಯ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ‘ಸಾಧನೆ ಮಾಡಲು ಅಂಗ ವೈಕಲ್ಯ ಅಡ್ಡಿ ಬರುವುದಿಲ್ಲ. ಸಮಸ್ಯೆಗಳು ಬಂದಾಗ ಧೈರ್ಯದಿಂದ ಎದುರಿಸಬೇಕು’ ಎಂದು ‘ಬೆಳಕು’ ಅಕಾಡೆಮಿ ಅಧ್ಯಕ್ಷೆ ಅಶ್ವಿನಿ ಅಂಗಡಿ ತಿಳಿಸಿದರು.</p>.<p>ತಾಲ್ಲೂಕಿನ ಗೊಲ್ಲಹಳ್ಳಿಯಲ್ಲಿ ಹಿತಚಿಂತನ ಚಾರಿಟೆಬಲ್ ಟ್ರಸ್ಟ್ ವತಿಯಿಂದ ವಿಶ್ವ ತಾಯಂದಿರ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಸ್ತನ ಕ್ಯಾನ್ಸರ್ ತಪಾಸಣೆ ಹಾಗೂ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕ್ಯಾನ್ಸರ್ ತಜ್ಞೆ ಪೂವಮ್ಮ ಮಾತನಾಡಿ, ‘ಹೆಣ್ಣು ಮಕ್ಕಳ ಆರೋಗ್ಯ ಕೆಟ್ಟರೆ ಇಡೀ ಕುಟುಂಬದ ವಾತಾವರಣ ಹದಗೆಡುತ್ತದೆ. ತಾಯಂದಿರ ಆರೋಗ್ಯದ ಬಗ್ಗೆ ಕಾಳಜಿ ಇರಲಿ‘ ಎಂದು ಸಲಹೆ ಮಾಡಿದರು.</p>.<p>ಹಿತಚಿಂತನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿ.ರಾಮಸ್ವಾಮಿ ಮಾತನಾಡಿ, ಈಗಾಗಲೇ ಉಚಿತ ಔಷಧಿಗಳನ್ನು ಅಶಕ್ತರಿಗೆ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.</p>.<p>ಶ್ವಾಸಕೋಶ ತಜ್ಞ ಗಣೇಶ್ ಮಾತನಾಡಿ, ನಿತ್ಯ ವ್ಯಾಯಾಮ, ನಿಯಮಿತ ಆಹಾರವೇ ರೋಗಗಳು ಬರದಂತೆ ತಡೆಯುವ ದಿವ್ಯೌಷಧವಾಗಿದೆ ಎಂದರು.</p>.<p>ಇದೇ ವೇಳೆ ಟ್ರಸ್ಟಿ ಪುಟ್ಟಮ್ಮ ₹10 ಲಕ್ಷವನ್ನು ಟ್ರಸ್ಟ್ನ ಸೇವಾ ಕಾರ್ಯಗಳಿಗೆ ನೀಡಿದರು. ₹ 5 ಲಕ್ಷ ಮೌಲ್ಯದ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.</p>.<p>ವಿಸಿಎನ್ಆರ್ ಆಸ್ಪತ್ರೆಯ ವಿನಯ್, ಮೂಳೆತಜ್ಞ ಅರುಣ್, ಸ್ತ್ರೀರೋಗ ತಜ್ಞೆ ನೇಹಾ, ನೇತ್ರ ತಜ್ಞೆ ಮಾನಸಾ, ಸಾಯಿದತ್ತ ಆರೋಗ್ಯ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>