<p><strong>ಯಲಹಂಕ:</strong> ‘ಆರೋಗ್ಯ ಸಮಸ್ಯೆಗಳು ಗಂಭೀರ ಸ್ಥಿತಿಗೆ ತಲುಪಿದಾಗ ಆರ್ಥಿಕ ಹೊರೆಯ ಜೊತೆಗೆ ಚಿಕಿತ್ಸೆಗಳೂ ಫಲಕಾರಿಯಾಗದೆ ತೊಂದರೆ ಅನುಭವಿಸಬೇಕಾಗುತ್ತದೆ. ಎಲ್ಲರೂ ಮುಂಜಾಗ್ರತೆವಹಿಸಿ, ಅಗತ್ಯ ಚಿಕಿತ್ಸೆ ಪಡೆದುಕೊಂಡರೆ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.</p><p>ವಿಶ್ವವಾಣಿ ಫೌಂಡೇಷನ್, ಸಪ್ತಗಿರಿ ಆಸ್ಪತ್ರೆ ಹಾಗೂ ರಾಜಾನುಕುಂಟೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರ ಹಾಗೂ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p><p>‘ಇತ್ತೀಚಿನ ದಿನಗಳಲ್ಲಿ ಕೆಲವು ಆಸ್ಪತ್ರೆಗಳು ವ್ಯಾಪಾರಕ್ಕೆ ಇಳಿದಿವೆ. ಜೀವವಿಮೆ ಮತ್ತು ಆಯುಷ್ಮಾನ್ ಕಾರ್ಡ್ಗಳನ್ನು ಹೊಂದಿದ್ದರೆ ಕಷ್ಟಕಾಲದಲ್ಲಿ ನೆರವಿಗೆ ಬರುತ್ತದೆ. ಕ್ಷೇತ್ರದಲ್ಲಿ 15 ದಿನಗಳಿಗೊಮ್ಮೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p><p>ವಿಶ್ವವಾಣಿ ಫೌಂಡೇಷನ್ ಕಾರ್ಯದರ್ಶಿ ವಾಣಿಶ್ರೀ ವಿಶ್ವನಾಥ್ ಮಾತನಾಡಿ, ‘ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವು, ಉಚಿತವಾಗಿ ಔಷಧಿ ವಿತರಣೆ, ಸಾಮಾನ್ಯ ಹೆರಿಗೆ ಅಥವಾ ಸಿಜೇರಿಯನ್ಗೆ ನೆರವು, ಹೊಲಿಗೆತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ಹಾಗೂ ಉಚಿತವಾಗಿ ಹೊಲಿಗೆಯಂತ್ರ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p><p>ಹೊಲಿಗೆಯಂತ್ರ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನದ ಚೆಕ್, ಅಂಗವಿಕಲರಿಗೆ ಸಹಾಯಧನದ ಚೆಕ್, ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. </p><p>ವಿಶ್ವವಾಣಿ ಫೌಂಡೇಷನ್ ನಿರ್ದೇಶಕರಾದ ಅಲೋಕ್ ವಿಶ್ವನಾಥ್, ಪಲ್ಲವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಶ್ರೀನಿವಾಸ್, ಉಪಾಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ, ಪಿಡಿಒ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ಆರೋಗ್ಯ ಸಮಸ್ಯೆಗಳು ಗಂಭೀರ ಸ್ಥಿತಿಗೆ ತಲುಪಿದಾಗ ಆರ್ಥಿಕ ಹೊರೆಯ ಜೊತೆಗೆ ಚಿಕಿತ್ಸೆಗಳೂ ಫಲಕಾರಿಯಾಗದೆ ತೊಂದರೆ ಅನುಭವಿಸಬೇಕಾಗುತ್ತದೆ. ಎಲ್ಲರೂ ಮುಂಜಾಗ್ರತೆವಹಿಸಿ, ಅಗತ್ಯ ಚಿಕಿತ್ಸೆ ಪಡೆದುಕೊಂಡರೆ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.</p><p>ವಿಶ್ವವಾಣಿ ಫೌಂಡೇಷನ್, ಸಪ್ತಗಿರಿ ಆಸ್ಪತ್ರೆ ಹಾಗೂ ರಾಜಾನುಕುಂಟೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರ ಹಾಗೂ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p><p>‘ಇತ್ತೀಚಿನ ದಿನಗಳಲ್ಲಿ ಕೆಲವು ಆಸ್ಪತ್ರೆಗಳು ವ್ಯಾಪಾರಕ್ಕೆ ಇಳಿದಿವೆ. ಜೀವವಿಮೆ ಮತ್ತು ಆಯುಷ್ಮಾನ್ ಕಾರ್ಡ್ಗಳನ್ನು ಹೊಂದಿದ್ದರೆ ಕಷ್ಟಕಾಲದಲ್ಲಿ ನೆರವಿಗೆ ಬರುತ್ತದೆ. ಕ್ಷೇತ್ರದಲ್ಲಿ 15 ದಿನಗಳಿಗೊಮ್ಮೆ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p><p>ವಿಶ್ವವಾಣಿ ಫೌಂಡೇಷನ್ ಕಾರ್ಯದರ್ಶಿ ವಾಣಿಶ್ರೀ ವಿಶ್ವನಾಥ್ ಮಾತನಾಡಿ, ‘ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವು, ಉಚಿತವಾಗಿ ಔಷಧಿ ವಿತರಣೆ, ಸಾಮಾನ್ಯ ಹೆರಿಗೆ ಅಥವಾ ಸಿಜೇರಿಯನ್ಗೆ ನೆರವು, ಹೊಲಿಗೆತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ಹಾಗೂ ಉಚಿತವಾಗಿ ಹೊಲಿಗೆಯಂತ್ರ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p><p>ಹೊಲಿಗೆಯಂತ್ರ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನದ ಚೆಕ್, ಅಂಗವಿಕಲರಿಗೆ ಸಹಾಯಧನದ ಚೆಕ್, ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. </p><p>ವಿಶ್ವವಾಣಿ ಫೌಂಡೇಷನ್ ನಿರ್ದೇಶಕರಾದ ಅಲೋಕ್ ವಿಶ್ವನಾಥ್, ಪಲ್ಲವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಶ್ರೀನಿವಾಸ್, ಉಪಾಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷ ಎಸ್.ಜಿ.ನರಸಿಂಹಮೂರ್ತಿ, ಪಿಡಿಒ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>