<p>ಬೆಂಗಳೂರು: ‘ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಪ್ರಧಾನ ಕಚೇರಿಯನ್ನು ರಾಮನಗರದಲ್ಲಿ 178 ಎಕರೆಯ ಕ್ಯಾಂಪಸ್ಗೆ ಸ್ಥಳಾಂತರಿಸಿ, ಅಲ್ಲಿ ‘ಆರೋಗ್ಯ ನಗರ' ನಿರ್ಮಿಸಲಾಗುವುದು’ ಎಂದು ಉಪ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿ 100 ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಆರೋಗ್ಯ ಕೇಂದ್ರಗಳ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಇ- ಆಫೀಸ್ಗಳ ಮೂಲಕ ಇ-ಆಸ್ಪತ್ರೆಗಳನ್ನು ಪ್ರಾಥಮಿಕ ಆರೋಗ್ಯಕೇಂದ್ರಗಳ ಜತೆಗೆ ಸಂಪರ್ಕ ಬೆಸೆಯಲಾಗುತ್ತದೆ.ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ಸಂದರ್ಶನ ರಹಿತ ನೇಮಕ ವ್ಯವಸ್ಥೆ ಜಾರಿಗೊಳಿಸಲಾಗಿದೆ’ ಎಂದರು.</p>.<p>‘ವೈದ್ಯಕೀಯ ಮತ್ತು ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ವಿವಿಧ ಕ್ಷೇತ್ರಗಳ ಮುಖಂಡರನ್ನು ಒಳಗೊಂಡ ವಿಷನ್ ಗ್ರೂಪ್ ತಯಾರಿಸಲಾಗಿದೆ. ಸಾರ್ವಜನಿಕರು ಕೂಡ ಈ ಬಗ್ಗೆ ಸಲಹೆ ನೀಡಬಹುದಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಪನ್ಯಾಸಗಳ ವಿಡಿಯೊಗಳು ಹಾಗೂ ಪಠ್ಯಕ್ರಮಗಳಿಗೆ ಪ್ರತ್ಯೇಕ ಡಿಜಿಟಲ್ ವೇದಿಕೆ ನಿರ್ಮಿಸಲಾಗುತ್ತದೆ.ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆಗಾಗಿ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಜ್ಯ ಆಯೋಗ ಸ್ಥಾಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಪ್ರಧಾನ ಕಚೇರಿಯನ್ನು ರಾಮನಗರದಲ್ಲಿ 178 ಎಕರೆಯ ಕ್ಯಾಂಪಸ್ಗೆ ಸ್ಥಳಾಂತರಿಸಿ, ಅಲ್ಲಿ ‘ಆರೋಗ್ಯ ನಗರ' ನಿರ್ಮಿಸಲಾಗುವುದು’ ಎಂದು ಉಪ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.</p>.<p>ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿ 100 ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಆರೋಗ್ಯ ಕೇಂದ್ರಗಳ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಇ- ಆಫೀಸ್ಗಳ ಮೂಲಕ ಇ-ಆಸ್ಪತ್ರೆಗಳನ್ನು ಪ್ರಾಥಮಿಕ ಆರೋಗ್ಯಕೇಂದ್ರಗಳ ಜತೆಗೆ ಸಂಪರ್ಕ ಬೆಸೆಯಲಾಗುತ್ತದೆ.ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ಸಂದರ್ಶನ ರಹಿತ ನೇಮಕ ವ್ಯವಸ್ಥೆ ಜಾರಿಗೊಳಿಸಲಾಗಿದೆ’ ಎಂದರು.</p>.<p>‘ವೈದ್ಯಕೀಯ ಮತ್ತು ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ವಿವಿಧ ಕ್ಷೇತ್ರಗಳ ಮುಖಂಡರನ್ನು ಒಳಗೊಂಡ ವಿಷನ್ ಗ್ರೂಪ್ ತಯಾರಿಸಲಾಗಿದೆ. ಸಾರ್ವಜನಿಕರು ಕೂಡ ಈ ಬಗ್ಗೆ ಸಲಹೆ ನೀಡಬಹುದಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಪನ್ಯಾಸಗಳ ವಿಡಿಯೊಗಳು ಹಾಗೂ ಪಠ್ಯಕ್ರಮಗಳಿಗೆ ಪ್ರತ್ಯೇಕ ಡಿಜಿಟಲ್ ವೇದಿಕೆ ನಿರ್ಮಿಸಲಾಗುತ್ತದೆ.ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆಗಾಗಿ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಜ್ಯ ಆಯೋಗ ಸ್ಥಾಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>