2018 ನ.30ರಂದು ಜಾರಿಯಾದಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ 291 ಸಾಮಾನ್ಯ ದ್ವಿತೀಯ ಹಂತದ, 254 ಕ್ಲಿಷ್ಟಕರ ದ್ವಿತೀಯ ಹಂತದ, 900 ತೃತೀಯ ಹಾಗೂ 169 ತುರ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಚಿಕಿತ್ಸಾ ಮೊತ್ತವನ್ನು ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಪಡೆಯಲು ರೋಗಿಯ ಮಾಹಿತಿ ಹಾಗೂ ಚಿಕಿತ್ಸಾ ವಿವರವನ್ನು ಟ್ರಸ್ಟ್ನ ಪೋರ್ಟಲ್ನಲ್ಲಿ ದಾಖಲಿಸಬೇಕಾಗುತ್ತದೆ. ಆದರೆ, ಆಸ್ಪತ್ರೆಯಲ್ಲಿ ನಿಗದಿತ ಪ್ರಮಾಣದಲ್ಲಿ ಸಿಬ್ಬಂದಿ ಇಲ್ಲದ ಪರಿಣಾಮ ಹಣ ಮರುಪಾವತಿ ವಿಳಂಬವಾಗುತ್ತಿದೆ.