ಸಮ್ಮೇಳನಾಧ್ಯಕ್ಷ ಪಿ.ಎಸ್.ಶಂಕರ್ ‘ವೈದ್ಯಕೀಯ ಬರವಣಿಗೆ ಸಮೃದ್ಧವಾಗಿದ್ದರೂ ಅದಕ್ಕೆ ಸಾಹಿತ್ಯಿಕ ಮನ್ನಣೆ ಸಿಕ್ಕಿಲ್ಲ. ನಮ್ಮ ಬರವಣಿಗೆ ಸೃಜನಾತ್ಮಕವಲ್ಲ ಎಂಬ ಅಭಿಪ್ರಾಯವಿದೆ. ವೈದ್ಯಕೀಯ ವಿಜ್ಞಾನದಲ್ಲಿ ಪದವಿ ಪಡೆದವರು ನಗರ ಹಾಗೂ ಹಳ್ಳಿಗಾಡಿನ ಜನರ ಜೊತೆ ಬೆರೆತು ಕೆಲಸ ಮಾಡಬೇಕಿದೆ. ರೋಗಿಗಳನ್ನು ಅವರ ಮಾತೃಭಾಷೆಯಲ್ಲೇ ವಿಚಾರಿಸಬೇಕಾಗುತ್ತದೆ. ಹೀಗಾಗಿ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲೂ ಕನ್ನಡದ ಮೂಲಕ ಸಾಮಾನ್ಯ ರೋಗಗಳ ಗುಣಲಕ್ಷಣ, ಚಿಕಿತ್ಸಾ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕು. ವಾರದಲ್ಲಿ ಎರಡು ದಿನಗಳಲ್ಲಿ ಕನ್ನಡ ತರಗತಿಗಳನ್ನು ಆಯೋಜಿಸಬೇಕು’ ಎಂದು ಸಲಹೆ ನೀಡಿದರು.