ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) ಕಾಯ್ದೆ -2011ರ ಪ್ರಕಾರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯಬೇಕು. ಆದರೆ, ಈ ವರ್ಷ ಚುನಾವಣಾ ನೀತಿ ಸಂಹಿತೆ ಜಾರಿಯಾದ್ದರಿಂದ ವರ್ಗಾವಣೆ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗವರ್ಗಾವಣೆ ಕೌನ್ಸೆಲಿಂಗ್ಗೆ ಅಧಿಕಾರಿಗಳು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ನಾನಾ ಹಂತಗಳಲ್ಲಿ ಸಮಿತಿಗಳನ್ನು ರಚಿಸಲಾಗಿದೆ.