ಬೆಂಗಳೂರು: ‘ಕೋವಿಡ್ ಸೇನಾನಿಗಳಾಗಿ ಕೆಲಸ ಮಾಡುವ ಶುಶ್ರೂಷಕರಿಗೆ ಅಪಾಯ ಭತ್ಯೆ ನೀಡುವುದಾಗಿ ಸರ್ಕಾರ ಹೇಳಿತ್ತು. ಆದರೆ ಅರೆ ವೈದ್ಯಕೀಯ ಸಿಬ್ಬಂದಿಗೆ ಈ ಭತ್ಯೆ ಇನ್ನೂ ಕೈಸೇರಿಲ್ಲ. ಈಗಲಾದರೂ ಇದನ್ನು ಒದಗಿಸಲು ಕ್ರಮ ಕೈಗೊಳ್ಳಿ’ ಎಂದುಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್, ಸರ್ಕಾರವನ್ನು ಒತ್ತಾಯಿಸಿದರು.