‘ರಸ್ತೆ ಮತ್ತು ಸಾರಿಗೆ ಪ್ರತಿಯೊಬ್ಬರ ಅವಿಭಾಜ್ಯ ಅಂಗವಾಗಿದೆ. ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ರಸ್ತೆ ಬಳಕೆದಾರರೇ ಆಗಿದ್ದಾರೆ. ರಸ್ತೆ ಅಪಘಾತದಲ್ಲಿ ಪ್ರತಿವರ್ಷ ಲಕ್ಷಾಂತರ ಜೀವಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಕೋಟ್ಯಂತರ ಜನರಿಗೆ ಗಂಭೀರ ಗಾಯವಾಗುತ್ತಿದೆ. ಆದ್ದರಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಜೀವರಕ್ಷಾ ಟ್ರಸ್ಟ್ ಸಹಯೋಗದಲ್ಲಿ ‘ರಾಸ್ತಾ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಡಿ ಪೊಲೀಸರು, ಆಂಬುಲೆನ್ಸ್ ಚಾಲಕರು ಹಾಗೂ ಸಾರ್ವಜನಿಕರಿಗೆ ರಸ್ತೆ ಅಪಘಾತದ ವೇಳೆ ತುರ್ತು ಚಿಕಿತ್ಸೆ ಬಗ್ಗೆ ತರಬೇತಿ ನೀಡಲಾಗುತ್ತದೆ’ ಎಂದು ಇಲಾಖೆ ತಿಳಿಸಿದೆ.