ರಾಜ್ಯದ ಮುಂದಿನ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಗಬೇಕಾದ ಆದ್ಯತೆ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವೈದ್ಯಕೀಯ ತಜ್ಞರೊಂದಿಗೆ ನಗರದಲ್ಲಿ ಶುಕ್ರವಾರ ಸಭೆ ನಡೆಸಿದರು. ನಾರಾಯಣ ಹೃದಯಾಲಯದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಪ್ರಾಧ್ಯಾಪಕ ಡಾ.ರವಿ ಕೆ. ಸೇರಿ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರ ಜತೆಗೆ ಆರೋಗ್ಯ ಕ್ಷೇತ್ರದ ಸುಧಾರಣೆ ಬಗ್ಗೆ ಚರ್ಚಿಸಿದರು.