<p><strong>ಬೆಂಗಳೂರು</strong>: ರಾಜ್ಯದ ಎಂಟು ಜಿಲ್ಲೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಎಂಡೆಮಿಕ್ (ಅಯೋ<br />ಡಿನ್ ಕೊರತೆ) ಜಿಲ್ಲೆಗಳು ಎಂದು ಗುರುತಿಸಿದ್ದು,ಅಯೋಡಿನ್ ಕೊರತೆ ಪ್ರಮಾಣವನ್ನು ಶೇ 5ಕ್ಕಿಂತ ಕಡಿಮೆ ಮಾಡುವ ಗುರಿ ಹಾಕಿಕೊಂಡಿದೆ.</p>.<p>ಅಯೋಡಿನ್ ಕೊರತೆಯಿಂದ ಆರೋಗ್ಯದಲ್ಲಿ ಕಾಣಿಸಿಕೊಳ್ಳುವ ನ್ಯೂನತೆಗಳ ನಿಯಂತ್ರಣ ಕುರಿತರಾಷ್ಟ್ರೀಯ ಕಾರ್ಯಕ್ರಮದಡಿ ಇಲಾಖೆ ಇದೇ 21ರಿಂದ 27ರವರೆಗೆ ರಾಜ್ಯದಾದ್ಯಂತ ‘ವಿಶ್ವ ಅಯೋಡಿನ್ ದಿನ ಹಾಗೂ ಜಾಗೃತಿ ಸಪ್ತಾಹ'ವನ್ನು ಏರ್ಪಡಿಸಿದೆ.</p>.<p>ಅಯೋಡಿನ್ ಕೊರತೆಯಿಂದ ಬುದ್ಧಿಮಾಂದ್ಯತೆ, ಕುಬ್ಜತನ, ಕಿವುಡುತನ, ಮೂಕತನ ಹಾಗೂ ಗಳಗಂಡ ಸೇರಿದಂತೆ ವಿವಿಧ ಸಮಸ್ಯೆ ಕಾಣಿಸಿಕೊಳ್ಳಲಿದೆ. ರಾಜ್ಯದಲ್ಲಿ ಅಯೋಡಿನ್ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಮನೆಯ ಮಟ್ಟದಲ್ಲಿ ಅಯೋಡಿನ್ಯುಕ್ತ ಉಪ್ಪಿನ ಬಳಕೆಯನ್ನು ಶೇ 100 ರಷ್ಟು ಖಚಿತಪಡಿಸುವ ಗುರಿಯನ್ನು ಇಲಾಖೆ ಹಾಕಿಕೊಂಡಿದೆ.</p>.<p>ದಕ್ಷಿಣ ಕನ್ನಡ, ಬಳ್ಳಾರಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯನ್ನು ಎಂಡೆಮಿಕ್ (ಅಯೋಡಿನ್ ಕೊರತೆ) ಜಿಲ್ಲೆಗಳು ಎಂದು ಗುರುತಿಸಲಾಗಿದೆ.</p>.<p>ಅಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನತೆ ಹಾಗೂ ಪರಿಣಾಮವನ್ನು ಸಮೀಕ್ಷೆ ಮಾಡುವುದು, ಸಾಮಾನ್ಯ ಉಪ್ಪಿನ ಬದಲು ಅಯೋಡಿನ್ಯುಕ್ತ ಉಪ್ಪು ಬಳಕೆ ಬಗ್ಗೆ ಅರಿವು ಮೂಡಿಸುವುದು, 5 ವರ್ಷಗಳಿಗೆ ಒಮ್ಮೆ ಸಮೀಕ್ಷೆ ಮಾಡುವುದು, ಮನೆಯ ಉಪ್ಪು ಪಡೆದು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸುವುದು, ಜಾಥಾ, ಶಾಲೆಗಳಲ್ಲಿ ಚರ್ಚಾ ಸ್ಪರ್ಧೆ, ಪ್ರಬಂಧ, ರಸಪ್ರಶ್ನೆ, ಚಿತ್ರಕಲೆ, ಸಭೆ ಹಾಗೂ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ಎಂಟು ಜಿಲ್ಲೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಎಂಡೆಮಿಕ್ (ಅಯೋ<br />ಡಿನ್ ಕೊರತೆ) ಜಿಲ್ಲೆಗಳು ಎಂದು ಗುರುತಿಸಿದ್ದು,ಅಯೋಡಿನ್ ಕೊರತೆ ಪ್ರಮಾಣವನ್ನು ಶೇ 5ಕ್ಕಿಂತ ಕಡಿಮೆ ಮಾಡುವ ಗುರಿ ಹಾಕಿಕೊಂಡಿದೆ.</p>.<p>ಅಯೋಡಿನ್ ಕೊರತೆಯಿಂದ ಆರೋಗ್ಯದಲ್ಲಿ ಕಾಣಿಸಿಕೊಳ್ಳುವ ನ್ಯೂನತೆಗಳ ನಿಯಂತ್ರಣ ಕುರಿತರಾಷ್ಟ್ರೀಯ ಕಾರ್ಯಕ್ರಮದಡಿ ಇಲಾಖೆ ಇದೇ 21ರಿಂದ 27ರವರೆಗೆ ರಾಜ್ಯದಾದ್ಯಂತ ‘ವಿಶ್ವ ಅಯೋಡಿನ್ ದಿನ ಹಾಗೂ ಜಾಗೃತಿ ಸಪ್ತಾಹ'ವನ್ನು ಏರ್ಪಡಿಸಿದೆ.</p>.<p>ಅಯೋಡಿನ್ ಕೊರತೆಯಿಂದ ಬುದ್ಧಿಮಾಂದ್ಯತೆ, ಕುಬ್ಜತನ, ಕಿವುಡುತನ, ಮೂಕತನ ಹಾಗೂ ಗಳಗಂಡ ಸೇರಿದಂತೆ ವಿವಿಧ ಸಮಸ್ಯೆ ಕಾಣಿಸಿಕೊಳ್ಳಲಿದೆ. ರಾಜ್ಯದಲ್ಲಿ ಅಯೋಡಿನ್ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಮನೆಯ ಮಟ್ಟದಲ್ಲಿ ಅಯೋಡಿನ್ಯುಕ್ತ ಉಪ್ಪಿನ ಬಳಕೆಯನ್ನು ಶೇ 100 ರಷ್ಟು ಖಚಿತಪಡಿಸುವ ಗುರಿಯನ್ನು ಇಲಾಖೆ ಹಾಕಿಕೊಂಡಿದೆ.</p>.<p>ದಕ್ಷಿಣ ಕನ್ನಡ, ಬಳ್ಳಾರಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯನ್ನು ಎಂಡೆಮಿಕ್ (ಅಯೋಡಿನ್ ಕೊರತೆ) ಜಿಲ್ಲೆಗಳು ಎಂದು ಗುರುತಿಸಲಾಗಿದೆ.</p>.<p>ಅಯೋಡಿನ್ ಕೊರತೆಯಿಂದ ಉಂಟಾಗುವ ನ್ಯೂನತೆ ಹಾಗೂ ಪರಿಣಾಮವನ್ನು ಸಮೀಕ್ಷೆ ಮಾಡುವುದು, ಸಾಮಾನ್ಯ ಉಪ್ಪಿನ ಬದಲು ಅಯೋಡಿನ್ಯುಕ್ತ ಉಪ್ಪು ಬಳಕೆ ಬಗ್ಗೆ ಅರಿವು ಮೂಡಿಸುವುದು, 5 ವರ್ಷಗಳಿಗೆ ಒಮ್ಮೆ ಸಮೀಕ್ಷೆ ಮಾಡುವುದು, ಮನೆಯ ಉಪ್ಪು ಪಡೆದು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸುವುದು, ಜಾಥಾ, ಶಾಲೆಗಳಲ್ಲಿ ಚರ್ಚಾ ಸ್ಪರ್ಧೆ, ಪ್ರಬಂಧ, ರಸಪ್ರಶ್ನೆ, ಚಿತ್ರಕಲೆ, ಸಭೆ ಹಾಗೂ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>