<p><strong>ಬೆಂಗಳೂರು: </strong>‘ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಆಗಿರುವ ದಾದಿಯರು (ನರ್ಸ್) ಕಡಿಮೆ ಸಂಬಳ, ಅನಿಯಮಿತ ಕೆಲಸದ ಅವಧಿ ಮುಂತಾದ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅದನ್ನು ಸರಿಪಡಿಸುವ ಹೊಣೆಗಾರಿಕೆ ನಮ್ಮದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘದ ಸಹಯೋಗದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ದಾದಿಯರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ನರ್ಸ್ ವೃತ್ತಿ ಅತ್ಯಂತ ಸಂಕೀರ್ಣವಾದುದು. ಆರೋಗ್ಯ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಬೇಕಾದರೆ ನರ್ಸ್ಗಳ ಪಾತ್ರ ಹಿರಿದು. ಎಷ್ಟೋ ಬಾರಿ ದಾದಿಯರ ವರ್ತನೆ ರೋಗಿಗಳಿಗೆ ಧೈರ್ಯ ನೀಡುತ್ತದೆ’ ಎಂದು ಶ್ಲಾಘಿಸಿದರು.</p>.<p>‘ನರ್ಸ್ ತರಬೇತಿ ನೀಡುವುದು ಬಹಳ ಮುಖ್ಯ. ಸಂಖ್ಯೆಗಿಂತ ಗುಣಮಟ್ಟ ಪ್ರಮುಖವಾದುದು. ನರ್ಸ್ ಆಗಿ ಕೆಲಸ ಮಾಡುವಾಗ ಸಮಯೋಚಿತ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನಾಯಕತ್ವ ಗುಣ, ಮಾತೃಹೃದಯ, ಅನುಕಂಪ, ಮಾನಸಿಕ ದೃಢತೆಯೂ ಬಹಳ ಮುಖ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ನರ್ಸ್ ತರಬೇತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದರು.</p>.<p>ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್, ಶಾಸಕ ಡಾ. ರಂಗನಾಥ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಭಗವಾನ್, ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು ಆಗಿರುವ ದಾದಿಯರು (ನರ್ಸ್) ಕಡಿಮೆ ಸಂಬಳ, ಅನಿಯಮಿತ ಕೆಲಸದ ಅವಧಿ ಮುಂತಾದ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅದನ್ನು ಸರಿಪಡಿಸುವ ಹೊಣೆಗಾರಿಕೆ ನಮ್ಮದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘದ ಸಹಯೋಗದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ದಾದಿಯರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ನರ್ಸ್ ವೃತ್ತಿ ಅತ್ಯಂತ ಸಂಕೀರ್ಣವಾದುದು. ಆರೋಗ್ಯ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಬೇಕಾದರೆ ನರ್ಸ್ಗಳ ಪಾತ್ರ ಹಿರಿದು. ಎಷ್ಟೋ ಬಾರಿ ದಾದಿಯರ ವರ್ತನೆ ರೋಗಿಗಳಿಗೆ ಧೈರ್ಯ ನೀಡುತ್ತದೆ’ ಎಂದು ಶ್ಲಾಘಿಸಿದರು.</p>.<p>‘ನರ್ಸ್ ತರಬೇತಿ ನೀಡುವುದು ಬಹಳ ಮುಖ್ಯ. ಸಂಖ್ಯೆಗಿಂತ ಗುಣಮಟ್ಟ ಪ್ರಮುಖವಾದುದು. ನರ್ಸ್ ಆಗಿ ಕೆಲಸ ಮಾಡುವಾಗ ಸಮಯೋಚಿತ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನಾಯಕತ್ವ ಗುಣ, ಮಾತೃಹೃದಯ, ಅನುಕಂಪ, ಮಾನಸಿಕ ದೃಢತೆಯೂ ಬಹಳ ಮುಖ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ನರ್ಸ್ ತರಬೇತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದರು.</p>.<p>ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್, ಶಾಸಕ ಡಾ. ರಂಗನಾಥ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಭಗವಾನ್, ಕರ್ನಾಟಕ ಶುಶ್ರೂಷಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>