<p><strong>ಬೆಂಗಳೂರು</strong>: ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ನಿರ್ಧರಿಸಿರುವ ಆರೋಗ್ಯ ಇಲಾಖೆ, ಪ್ರತಿ ತಿಂಗಳು 9 ಹಾಗೂ 24ರಂದು ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.</p>.<p>ಜನವರಿ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಭಿಣಿಯರಿಗಾಗಿಯೇ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.</p>.<p>ತಾಯಂದಿರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಗರ್ಭಿಣಿಯರ ಆರೋಗ್ಯ ತಪಾಸಣಾ ಶಿಬಿರಗಳನ್ನು ದೊಡ್ಡಮಟ್ಟದಲ್ಲಿ ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸುವಂತೆ ಸಚಿವರು ಸೂಚನೆ ನೀಡಿದ್ದಾರೆ.</p>.<p>ಗುಣಮಟ್ಟದ ಸೇವೆ ಒದಗಿಸುವ ಸಲುವಾಗಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೊಂಡಿದೆ. ಪ್ರತಿ ಗರ್ಭಿಣಿಗೆ ಜನನ ಯೋಜನೆಯನ್ನು ಮುಂಚಿತವಾಗಿಯೇ ಖಚಿತಪಡಿಸಿಕೊಳ್ಳುವುದು, 500 ಎಂಸಿಜಿ ಕ್ಯಾಲ್ಸಿಯಂ ಅನ್ನು ಗರ್ಭಧಾರಣೆಯ 14ನೇ ವಾರದಿಂದ ಹೆರಿಗೆ ಮತ್ತು 6 ತಿಂಗಳ ನಂತರದ ಅವಧಿಗೆ ನೀಡುವುದು, ಪ್ರತಿ ಭೇಟಿಯಲ್ಲಿ ರಕ್ತದೊತ್ತಡ ಮತ್ತು ತೂಕವನ್ನು ದಾಖಲು ಮಾಡುವುದು, ಹೆರಿಗೆಯ ಲಕ್ಷಣಗಳು ಮತ್ತು ಅಪಾಯದ ಲಕ್ಷಣಗಳ ಬಗ್ಗೆ, ಗರ್ಭಿಣಿಯರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ನಿರ್ಧರಿಸಿರುವ ಆರೋಗ್ಯ ಇಲಾಖೆ, ಪ್ರತಿ ತಿಂಗಳು 9 ಹಾಗೂ 24ರಂದು ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.</p>.<p>ಜನವರಿ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಭಿಣಿಯರಿಗಾಗಿಯೇ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.</p>.<p>ತಾಯಂದಿರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಗರ್ಭಿಣಿಯರ ಆರೋಗ್ಯ ತಪಾಸಣಾ ಶಿಬಿರಗಳನ್ನು ದೊಡ್ಡಮಟ್ಟದಲ್ಲಿ ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸುವಂತೆ ಸಚಿವರು ಸೂಚನೆ ನೀಡಿದ್ದಾರೆ.</p>.<p>ಗುಣಮಟ್ಟದ ಸೇವೆ ಒದಗಿಸುವ ಸಲುವಾಗಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೊಂಡಿದೆ. ಪ್ರತಿ ಗರ್ಭಿಣಿಗೆ ಜನನ ಯೋಜನೆಯನ್ನು ಮುಂಚಿತವಾಗಿಯೇ ಖಚಿತಪಡಿಸಿಕೊಳ್ಳುವುದು, 500 ಎಂಸಿಜಿ ಕ್ಯಾಲ್ಸಿಯಂ ಅನ್ನು ಗರ್ಭಧಾರಣೆಯ 14ನೇ ವಾರದಿಂದ ಹೆರಿಗೆ ಮತ್ತು 6 ತಿಂಗಳ ನಂತರದ ಅವಧಿಗೆ ನೀಡುವುದು, ಪ್ರತಿ ಭೇಟಿಯಲ್ಲಿ ರಕ್ತದೊತ್ತಡ ಮತ್ತು ತೂಕವನ್ನು ದಾಖಲು ಮಾಡುವುದು, ಹೆರಿಗೆಯ ಲಕ್ಷಣಗಳು ಮತ್ತು ಅಪಾಯದ ಲಕ್ಷಣಗಳ ಬಗ್ಗೆ, ಗರ್ಭಿಣಿಯರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>