ಮಾಗಡಿ ರಸ್ತೆ ಬಳಿ ಆರೋಗ್ಯ ಇಲಾಖೆಯ ನೂತನ 'ಆರೋಗ್ಯ ಸೌಧ' ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಧಾಕರ್, ‘ಆರೋಗ್ಯ ಇಲಾಖೆಯ 53 ಕಚೇರಿಗಳು ಒಂದೇ ಕಡೆ ಸುಲಲಿತವಾಗಿ ಕಾರ್ಯನಿರ್ವಹಿಸಲು ಹೊಸ ಕಟ್ಟಡ ನಿರ್ಮಿಸಲಾಗಿದೆ. ಆಯುಕ್ತಾಲಯ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಎಲ್ಲವೂ ಈ ಕಟ್ಟಡದಲ್ಲಿ ಕಚೇರಿ ಹೊಂದಲಿದೆ' ಎಂದು ತಿಳಿಸಿದರು.