<p><strong>ಬೆಂಗಳೂರು:</strong> ಕೊರೊನಾ ವೈರಸ್ ವ್ಯಾಪಕವಾಗಿ ಹರಡುವ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಮಾಡಲು ತೆರಳಿದ್ದ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಸಾರಾಯಿ ಪಾಳ್ಯದ ಸಾಧಿಕ್ ಲೇಔಟ್ ನಲ್ಲಿ ನಡೆದಿದೆ.</p>.<p>ಐದು ದಿನಗಳಿಂದ ನರ್ಸ್, ಆಶಾ ಕಾರ್ಯಕರ್ತೆಯರು ನೆಗಡಿ, ಕೆಮ್ಮು, ಜ್ವರ ಕುರಿತು ಜನರಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ಸಾಧಿಕ್ ಲೇಔಟ್ ಗೆ ತೆರಳಿ ಮರಳುತ್ತಿದ್ದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಬಳಿ ಇದ್ದ ವರದಿಯನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ ಎಂದು ಗೊತ್ತಾಗಿದೆ.</p>.<p>ಅಲ್ಲದೆ, ಅವರ ಮೊಬೈಲ್ ಫೋನ್ ಕಸಿದುಕೊಂಡು, 'ಯಾರನ್ನು ಕರೆಯುತ್ತೀರಾ' ಕರೆಯಿರಿ' ಎಂದು ಬೆದರಿಕ ಹಾಕಿದ ದುಷ್ಕರ್ಮಿಗಳು, ತಮಗೆ ಯಾವುದೇ ಮಾಹಿತಿ, ಮೊಬೈಲ್ ಸಂಖ್ಯೆ ನೀಡದಂತೆ ಸ್ಳೀಯಯ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ಮಾಡಿದ್ದಾರೆ ಎಂದು ಸ್ಥಳದಲ್ಲಿದ್ದ ಸಿಬ್ಬಂದಿ ಆರೋಪಿಸಿದ್ದಾರೆ.</p>.<p>ಈ ಕುರಿತು ಮಾಹಿತಿ ನೀಡಿದಾಗ ಆರೋಗ್ಯ ಇಲಾಖೆಯ ಅಧಿಕಾರಿಗಳಾಗಲೀ, ಪೊಲೀಸರು ಸ್ಪಂದಿಸಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.</p>.<p>ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಪ್ರತಿಕ್ರಿಯಿಸಿ, ಸಾಧಿಕ್ ಲೇಔಟ್ ನಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ, ಲೇಔಟ್ ನಲ್ಲಿ ಸಮೀಕ್ಷೆ ಮಾಡಲು ನಿರ್ಧರಿಸಲಾಗಿತ್ತು. ಇದಕ್ಕೆ ಅಲ್ಲಿನ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು ಎಂದರು.</p>.<p>ಸ್ಥಳಕ್ಕೆ ಹೊಯ್ಸಳ ಪೊಲೀಸರು ತೆರಳಿ, ಗುಂಪಾಗಿದ್ದ ಜನರನ್ನು ಚದುರಿಸಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದರು. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ನರ್ಸ್, ಆಶಾ ಕಾರ್ಯಕರ್ತೆಯರು ದೂರು ನೀಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.</p>.<p>ಹಲ್ಲೆಗೆ ಒಳಗಾದ ಕಾರ್ಯಕರ್ತೆಯ ಹೆಗ್ಗಡೆ ನಗರದ ಮನೆಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಹಲ್ಲೆ ನಡೆಸಿದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.</p>.<p>ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಲು ಉಪ ಮುಖ್ಯಮಂತ್ರಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ವೈರಸ್ ವ್ಯಾಪಕವಾಗಿ ಹರಡುವ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಮಾಡಲು ತೆರಳಿದ್ದ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಸಾರಾಯಿ ಪಾಳ್ಯದ ಸಾಧಿಕ್ ಲೇಔಟ್ ನಲ್ಲಿ ನಡೆದಿದೆ.</p>.<p>ಐದು ದಿನಗಳಿಂದ ನರ್ಸ್, ಆಶಾ ಕಾರ್ಯಕರ್ತೆಯರು ನೆಗಡಿ, ಕೆಮ್ಮು, ಜ್ವರ ಕುರಿತು ಜನರಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ಸಾಧಿಕ್ ಲೇಔಟ್ ಗೆ ತೆರಳಿ ಮರಳುತ್ತಿದ್ದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಬಳಿ ಇದ್ದ ವರದಿಯನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ ಎಂದು ಗೊತ್ತಾಗಿದೆ.</p>.<p>ಅಲ್ಲದೆ, ಅವರ ಮೊಬೈಲ್ ಫೋನ್ ಕಸಿದುಕೊಂಡು, 'ಯಾರನ್ನು ಕರೆಯುತ್ತೀರಾ' ಕರೆಯಿರಿ' ಎಂದು ಬೆದರಿಕ ಹಾಕಿದ ದುಷ್ಕರ್ಮಿಗಳು, ತಮಗೆ ಯಾವುದೇ ಮಾಹಿತಿ, ಮೊಬೈಲ್ ಸಂಖ್ಯೆ ನೀಡದಂತೆ ಸ್ಳೀಯಯ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ಮಾಡಿದ್ದಾರೆ ಎಂದು ಸ್ಥಳದಲ್ಲಿದ್ದ ಸಿಬ್ಬಂದಿ ಆರೋಪಿಸಿದ್ದಾರೆ.</p>.<p>ಈ ಕುರಿತು ಮಾಹಿತಿ ನೀಡಿದಾಗ ಆರೋಗ್ಯ ಇಲಾಖೆಯ ಅಧಿಕಾರಿಗಳಾಗಲೀ, ಪೊಲೀಸರು ಸ್ಪಂದಿಸಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.</p>.<p>ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಪ್ರತಿಕ್ರಿಯಿಸಿ, ಸಾಧಿಕ್ ಲೇಔಟ್ ನಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ, ಲೇಔಟ್ ನಲ್ಲಿ ಸಮೀಕ್ಷೆ ಮಾಡಲು ನಿರ್ಧರಿಸಲಾಗಿತ್ತು. ಇದಕ್ಕೆ ಅಲ್ಲಿನ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು ಎಂದರು.</p>.<p>ಸ್ಥಳಕ್ಕೆ ಹೊಯ್ಸಳ ಪೊಲೀಸರು ತೆರಳಿ, ಗುಂಪಾಗಿದ್ದ ಜನರನ್ನು ಚದುರಿಸಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದರು. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ನರ್ಸ್, ಆಶಾ ಕಾರ್ಯಕರ್ತೆಯರು ದೂರು ನೀಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.</p>.<p>ಹಲ್ಲೆಗೆ ಒಳಗಾದ ಕಾರ್ಯಕರ್ತೆಯ ಹೆಗ್ಗಡೆ ನಗರದ ಮನೆಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಹಲ್ಲೆ ನಡೆಸಿದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.</p>.<p>ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಲು ಉಪ ಮುಖ್ಯಮಂತ್ರಿ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>