ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು 15 ದಿನಗಳಿಂದ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸುತ್ತಿದ್ದಾರೆ. ಬುಧವಾರ ಮಾಹಿತಿ ಸಂಗ್ರಹಿಸುತ್ತಿದ್ದ ಆಶಾ ಕಾರ್ಯಕರ್ತೆಯರ ವಿರುದ್ಧ ಸ್ಥಳೀಯ ಮಸೀದಿಯ ಧ್ವನಿವರ್ಧಕದಿಂದ ‘ಆರೋಗ್ಯ ಕಾರ್ಯಕರ್ತೆಯರಿಗೆ ಯಾವುದೇ ಮಾಹಿತಿ ನೀಡದೆ, ಅವರನ್ನು ಇಲ್ಲಿಂದ ಓಡಿಸಿ‘ ಎಂಬ ಸಂದೇಶ ನೀಡಲಾಗಿತ್ತು. ತಕ್ಷಣ ಸಮೀಕ್ಷೆಯಲ್ಲಿ ತೊಡಗಿದವರನ್ನು ಸುತ್ತುವರಿದ ಕೆಲವರು ಕೃಷ್ಣವೇಣಿ ಅವರ ಮೊಬೈಲ್ ಕಸಿದುಕೊಂಡು ಸಮೀಕ್ಷೆಯ ಕಾಗದ ಪತ್ರ ಹರಿದು ಬೆದರಿಕೆ ಒಡ್ಡಿದ್ದರು. ಈ ಬಗ್ಗೆ ಮಾಹಿತಿ ನೀಡಿದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಪಂದಿಸಿಲ್ಲ’ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.