2019ರ ಫೆಬ್ರುವರಿ ತಿಂಗಳಲ್ಲಿ ಅಂಗಾಂಗ ಕಸಿಗೆ ಜೀವಸಾರ್ಥಕತೆ ಯೋಜನೆಯಡಿ ಬಾಲಕನ ಹೆಸರನ್ನು ಪೋಷಕರು ನೋಂದಾಯಿಸಿದ್ದರು. ಬಾಲಕನಿಗೆ ಹೃದಯ ನೀಡಿದ ವ್ಯಕ್ತಿ 45 ವರ್ಷದವರಾಗಿದ್ದು, ಅವರು ಮಿದುಳು ರಕ್ತ ಸ್ರಾವದಿಂದ ಬಳಲುತ್ತಿದ್ದರು. ಹೆಬ್ಬಾಳದ ಆಸ್ಟರ್ ಸಿಎಂಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2019ರ ಡಿ.21ರಂದು ಅವರ ಮಿದುಳು ನಿಷ್ಕ್ರಿಯ ಗೊಂಡಿರುವುದನ್ನು ವೈದ್ಯರು ಪ್ರಕಟಿಸಿದರು. ಅವರ ಕುಟುಂಬ ಅಂಗಾಂಗ ದಾನಕ್ಕೆ ಒಪ್ಪಿಕೊಂಡಿತು.