ವೃದ್ಧೆಯು 2013ರಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ವೇಳೆ ಅವರಿಗೆ ಕೃತಕ ಹೃದಯ ಕವಾಟ ಅಳವಡಿಕೆ ಮಾಡಲಾಗಿತ್ತು. ಆದರೆ, ಎರಡು ವರ್ಷಗಳಿಂದ ಆ ಕವಾಟ ಕ್ಷೀಣಿಸುತ್ತಿತ್ತು. ಹಾನಿಯ ಪ್ರಮಾಣವು ಗಂಭೀರ ಸ್ವರೂಪ ಪಡೆದ ಬಳಿಕ ಅವರಿಗೆ ಹೃದಯದ ಭಾಗದಲ್ಲಿ ಹೆಚ್ಚಿನ ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸಿತು. ಇದರಿಂದಾಗಿ ಜನವರಿಯಲ್ಲಿ ಆಸ್ಪತ್ರೆಗೆ ದಾಖಲಾದರು. ಹೃದಯ ವೈಫಲ್ಯದ ಲಕ್ಷಣಗಳು ಕೂಡ ಅವರಲ್ಲಿ ಕಾಣಿಸಿಕೊಂಡಿದ್ದವು. ಉಸಿರಾಟ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದ ಕಾರಣ ಮತ್ತೊಮ್ಮೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸದಿರಲು ನಿರ್ಧರಿಸಲಾಯಿತು ಎಂದು ಆಸ್ಪತ್ರೆ ತಿಳಿಸಿದೆ.