ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಬಿಸಿಲಿನ ತಾಪಕ್ಕೆ ತಂಪೆರೆದ ಮಳೆ

Last Updated 14 ಜೂನ್ 2022, 20:12 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೆಲದಿನ ಬಿಡುವು ನೀಡಿದ್ದ ಮಳೆ ಮಂಗಳವಾರ ಸಂಜೆಯಿಂದ ರಾತ್ರಿಯವರೆಗೆ ಸುರಿದು ತಂಪೆರೆಯಿತು.

ಮಳೆಗಾಲ ಆರಂಭವಾದರೂ ಕೆಲ ದಿನಗಳಿಂದ ನಗರದಲ್ಲಿ ಬಿಸಿಲಿನ ತಾಪ ಹೆಚ್ಚಿತ್ತು. ಮಂಗಳವಾರ ಸುರಿದ ಮಳೆಯಿಂದಾಗಿ ಜನರ ಹರ್ಷಗೊಂಡರು.

ರಾಜರಾಜೇಶ್ವರಿನಗರ, ದೀಪಾಂಜಲಿನಗರ, ವಿಜಯನಗರ, ರಾಜಾಜಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಕಾಟನ್‌ಪೇಟೆ, ಮಲ್ಲೇಶ್ವರ, ಶೇಷಾದ್ರಿಪುರ, ನಂದಿನಿ ಲೇಔಟ್, ಯಶವಂತಪುರ, ಸದಾಶಿವನಗರ, ಗಿರಿನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಆಯಿತು.

ಶಿವಾಜಿನಗರ, ಎಂ.ಜಿ.ರಸ್ತೆ, ಅಶೋಕನಗರ, ವಿವೇಕನಗರ, ಕೋರಮಂಗಲ ಹಾಗೂ ಸುತ್ತಮುತ್ತ ಮಳೆ ಇತ್ತು.

ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಜನ, ಮಳೆಯಲ್ಲೇ ಸಂಚರಿಸಿದರು. ಕೆಲವೆಡೆ ಮಳೆಯಲ್ಲಿ ಜನ ಹೆಜ್ಜೆ ಹಾಕಿದರು. ದ್ವಿಚಕ್ರ ವಾಹನ ಸವಾರರು ರಸ್ತೆ ಬದಿಗಳಲ್ಲಿ ಆಶ್ರಯ ಪಡೆದಿದ್ದರು. ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಂಡುಬಂತು.

‘ಕೆಲದಿನ ಬಿಡುವು ನೀಡಿದ್ದ ಮಳೆ ಮತ್ತೆ ಶುರುವಾಗಿದೆ. ಮಂಗಳವಾರ ಬಹುತೇಕ ಕಡೆ ಉತ್ತಮ ಮಳೆಯಾಗಿದೆ. ಮಳೆಯಿಂದ ಸಮಸ್ಯೆಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT