ಮಲ್ಲೇಶ್ವರ ರೈಲ್ವೆ ನಿಲ್ದಾಣ ರಸ್ತೆ ಹಾಗೂ ವೈಟ್ಫೀಲ್ಡ್ ಮುಖ್ಯರಸ್ತೆಯಲ್ಲಿ ಮರಗಳು ನೆಲಕ್ಕುರುಳಿದ್ದವು. ಇದರಿಂದಾಗಿ ಸೋಮವಾರ ಬೆಳಿಗ್ಗೆ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ತೊಂದರೆ ಉಂಟಾಯಿತು. ಸಂಚಾರ ದಟ್ಟಣೆಯೂ ಕಂಡುಬಂತು. ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ, ಮರಗಳನ್ನು ಕತ್ತರಿಸಿ ಬೇರೆಡೆ ಸಾಗಿಸಿದರು. ನಂತರವೇ ಸಂಚಾರ ಸ್ಥಿತಿ ಯಥಾಸ್ಥಿತಿಗೆ ಬಂತು.