ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನೂ ಎರಡು ದಿನ ಗುಡುಗು ಸಹಿತ ಮಳೆ

Last Updated 17 ಮಾರ್ಚ್ 2023, 22:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯ ಅಲ್ಲಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ ಕಲಬುರಗಿ ಜಿಲ್ಲೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಶುಕ್ರವಾರ ದಾಖಲಾಗಿತ್ತು. ಕರಾವಳಿ ಭಾಗದಲ್ಲಿ ಒಣಹವೆ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT