<p><strong>ಬೆಂಗಳೂರು: </strong>ನಗರದಲ್ಲಿ ಗುರುವಾರ ಮಧ್ಯಾಹ್ನ ಗುಡುಗು–ಸಿಡಿಲು ಸಹಿತವಾಗಿ ಜೋರು ಮಳೆ ಸುರಿಯಿತು.</p>.<p>ಬುಧವಾರ ತಡರಾತ್ರಿಯೂ ನಗರದ ಹಲವೆಡೆ ಜೋರು ಮಳೆಯಾಗಿತ್ತು. ಸುಮಾರು 30 ನಿಮಿಷ ಸುರಿದ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ಹರಿಯಿತು.</p>.<p>ಗುರುವಾರ ಬೆಳಿಗ್ಗೆಯಿಂದ ನಗರದಲ್ಲಿ ಬಿಸಿಲು ಹಾಗೂ ಕೆಲ ಬಾರಿ ಮೋಡ ಕವಿದ ವಾತಾವರಣ ಕಾಣಿಸಿತು. ಮಧ್ಯಾಹ್ನ 2.40ಕ್ಕೆ ಜಿಟಿ ಜಿಟಿಯಾಗಿ ಮಳೆ ಆರಂಭವಾಗಿ, ನಂತರ ಮಳೆ ಅಬ್ಬರ ಹೆಚ್ಚಾಯಿತು. ಮಳೆಯ ಜೊತೆಯಲ್ಲಿ ಗಾಳಿಯೂ ಜೋರಾಗಿ ಬೀಸಿತ್ತು.</p>.<p>ಜಾಲಹಳ್ಳಿ, ಯಶವಂತಪುರ, ಪೀಣ್ಯ, ದಾಸರಹಳ್ಳಿ, ಎಚ್ಎಂಟಿ ಲೇಔಟ್, ಲಗ್ಗೆರೆ, ರಾಜಾಜಿನಗರ, ವಿಜಯ<br />ನಗರ, ಮಹಾಲಕ್ಷ್ಮಿಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು- ಸಿಡಿಲು ಸಹಿತ ಮಳೆ ಸುರಿಯಿತು.</p>.<p>ಕೊರೊನಾ ಸೋಂಕು ತಡೆಗೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದರಿಂದ ನಗರದಲ್ಲಿ ಜನರ ಓಡಾಟ ಕಡಿಮೆ ಇತ್ತು. ಕೆಲ ಕಡೆ ಕಾಲುವೆಗಳಲ್ಲಿ ನೀರು ತುಂಬಿ ಹರಿದು, ತ್ಯಾಜ್ಯವೆಲ್ಲ ರಸ್ತೆಗೆ ಬಂದು ಬಿದ್ದಿದೆ.</p>.<p>ಕೆಲಸ ಹಾಗೂ ವಸ್ತುಗಳ ಖರೀದಿ ಸಲುವಾಗಿ ಹಲವು ಸಾರ್ವಜನಿಕರು ಮಾರುಕಟ್ಟೆಗಳಿಗೆ ಬಂದಿದ್ದರು. ಮಧ್ಯಾಹ್ನವೇ ಮಳೆ ಸುರಿದಿದ್ದರಿಂದ ಹಲವರು ರಸ್ತೆ ಬದಿಗಳಲ್ಲಿ ಆಶ್ರಯ ಪಡೆದುಕೊಂಡಿದ್ದು ಕಂಡುಬಂತು.</p>.<p>ನಗರದ ಬಹುತೇಕ ಕಡೆ ಕಾಮಗಾರಿ ಹಾಗೂ ಕೇಬಲ್ ಅಳವಡಿಕೆಗಾಗಿ ರಸ್ತೆ ಮತ್ತು ಕಾಲುವೆಗಳನ್ನು ಅಗೆಯಲಾಗಿದೆ. ಮಳೆಯಿಂದಾಗಿ ಅಂಥ ಸ್ಥಳಗಳಲ್ಲಿದ್ದ ಗುಂಡಿಗಳಲ್ಲಿ ನೀರು ನಿಂತುಕೊಂಡಿತ್ತು. ಇದರಿಂದಾಗಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಯಿತು.</p>.<p class="Subhead">ಕೆಳಸೇತುವೆಗಳಲ್ಲಿ ತುಂಬಿ ಹರಿದ ನೀರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿಯ ಓಕಳಿಪುರದ ಕೆಳಸೇತುವೆ, ಶಿವಾನಂದ ವೃತ್ತದ ಕೆಳಸೇತುವೆಗಳಲ್ಲಿ ನೀರು ತುಂಬಿ ಹರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಗುರುವಾರ ಮಧ್ಯಾಹ್ನ ಗುಡುಗು–ಸಿಡಿಲು ಸಹಿತವಾಗಿ ಜೋರು ಮಳೆ ಸುರಿಯಿತು.</p>.<p>ಬುಧವಾರ ತಡರಾತ್ರಿಯೂ ನಗರದ ಹಲವೆಡೆ ಜೋರು ಮಳೆಯಾಗಿತ್ತು. ಸುಮಾರು 30 ನಿಮಿಷ ಸುರಿದ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ಹರಿಯಿತು.</p>.<p>ಗುರುವಾರ ಬೆಳಿಗ್ಗೆಯಿಂದ ನಗರದಲ್ಲಿ ಬಿಸಿಲು ಹಾಗೂ ಕೆಲ ಬಾರಿ ಮೋಡ ಕವಿದ ವಾತಾವರಣ ಕಾಣಿಸಿತು. ಮಧ್ಯಾಹ್ನ 2.40ಕ್ಕೆ ಜಿಟಿ ಜಿಟಿಯಾಗಿ ಮಳೆ ಆರಂಭವಾಗಿ, ನಂತರ ಮಳೆ ಅಬ್ಬರ ಹೆಚ್ಚಾಯಿತು. ಮಳೆಯ ಜೊತೆಯಲ್ಲಿ ಗಾಳಿಯೂ ಜೋರಾಗಿ ಬೀಸಿತ್ತು.</p>.<p>ಜಾಲಹಳ್ಳಿ, ಯಶವಂತಪುರ, ಪೀಣ್ಯ, ದಾಸರಹಳ್ಳಿ, ಎಚ್ಎಂಟಿ ಲೇಔಟ್, ಲಗ್ಗೆರೆ, ರಾಜಾಜಿನಗರ, ವಿಜಯ<br />ನಗರ, ಮಹಾಲಕ್ಷ್ಮಿಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು- ಸಿಡಿಲು ಸಹಿತ ಮಳೆ ಸುರಿಯಿತು.</p>.<p>ಕೊರೊನಾ ಸೋಂಕು ತಡೆಗೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದರಿಂದ ನಗರದಲ್ಲಿ ಜನರ ಓಡಾಟ ಕಡಿಮೆ ಇತ್ತು. ಕೆಲ ಕಡೆ ಕಾಲುವೆಗಳಲ್ಲಿ ನೀರು ತುಂಬಿ ಹರಿದು, ತ್ಯಾಜ್ಯವೆಲ್ಲ ರಸ್ತೆಗೆ ಬಂದು ಬಿದ್ದಿದೆ.</p>.<p>ಕೆಲಸ ಹಾಗೂ ವಸ್ತುಗಳ ಖರೀದಿ ಸಲುವಾಗಿ ಹಲವು ಸಾರ್ವಜನಿಕರು ಮಾರುಕಟ್ಟೆಗಳಿಗೆ ಬಂದಿದ್ದರು. ಮಧ್ಯಾಹ್ನವೇ ಮಳೆ ಸುರಿದಿದ್ದರಿಂದ ಹಲವರು ರಸ್ತೆ ಬದಿಗಳಲ್ಲಿ ಆಶ್ರಯ ಪಡೆದುಕೊಂಡಿದ್ದು ಕಂಡುಬಂತು.</p>.<p>ನಗರದ ಬಹುತೇಕ ಕಡೆ ಕಾಮಗಾರಿ ಹಾಗೂ ಕೇಬಲ್ ಅಳವಡಿಕೆಗಾಗಿ ರಸ್ತೆ ಮತ್ತು ಕಾಲುವೆಗಳನ್ನು ಅಗೆಯಲಾಗಿದೆ. ಮಳೆಯಿಂದಾಗಿ ಅಂಥ ಸ್ಥಳಗಳಲ್ಲಿದ್ದ ಗುಂಡಿಗಳಲ್ಲಿ ನೀರು ನಿಂತುಕೊಂಡಿತ್ತು. ಇದರಿಂದಾಗಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಯಿತು.</p>.<p class="Subhead">ಕೆಳಸೇತುವೆಗಳಲ್ಲಿ ತುಂಬಿ ಹರಿದ ನೀರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಬಳಿಯ ಓಕಳಿಪುರದ ಕೆಳಸೇತುವೆ, ಶಿವಾನಂದ ವೃತ್ತದ ಕೆಳಸೇತುವೆಗಳಲ್ಲಿ ನೀರು ತುಂಬಿ ಹರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>