<p><strong>ಬೆಂಗಳೂರು: </strong>ನಗರದಲ್ಲಿ ಕೆಲ ದಿನಗಳಿಂದ ಬಿಡುವು ನೀಡುತ್ತಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಗುಡುಗು–ಸಿಡಿಲಿನ ಅಬ್ಬರವೂ ಜೋರಾಗಿದೆ.</p>.<p>ಶನಿವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಬಿಡುವು ನೀಡಿದ್ದ ಮಳೆ, ರಾತ್ರಿ ಜೋರಾಗಿ ಸುರಿಯಿತು. ಭಾನುವಾರವೂ ಬೆಳಿಗ್ಗೆಯಿಂದ ಸಂಜೆಯವರೆಗೂ ಮಳೆ ಇರಲಿಲ್ಲ. ರಾತ್ರಿ 8 ಗಂಟೆಯಿಂದ ಆರಂಭವಾದ ಮಳೆ, ತಡರಾತ್ರಿಯವರೆಗೂ ಸುರಿಯಿತು.</p>.<p>ಕಾಲುವೆಗಳು ತುಂಬಿ ಪ್ರಮುಖ ರಸ್ತೆಗಳ ಮೇಲೆಯೇ ನೀರು ಹೊಳೆಯಂತೆ ಹರಿಯಿತು. ತಗ್ಗು ಪ್ರದೇಶ<br />ಗಳಲ್ಲಿ ನೀರು ನಿಂತುಕೊಂಡ ದೃಶ್ಯಗಳು ಕಂಡುಬಂದವು.</p>.<p>ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಪೀಣ್ಯ,<br />ಲಗ್ಗೆರೆ, ನಂದಿನಿ ಲೇಔಟ್, ಮಲ್ಲೇಶ್ವರ, ಶೇಷಾದ್ರಿಪುರ, ಹೆಬ್ಬಾಳ, ಸಂಜಯನಗರ, ಆರ್.ಟಿ.ನಗರ, ನಾಗವಾರ, ಹೆಣ್ಣೂರು, ಬಾಣಸವಾಡಿ, ರಾಜರಾಜೇಶ್ವರಿನಗರ, ಕೆಂಗೇರಿ, ದೀಪಾಂಜಲಿನಗರ, ಚಾಮರಾಜಪೇಟೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಅಬ್ಬರವಿತ್ತು.</p>.<p>ಶಾಂತಿನಗರ, ವಿಲ್ಸನ್ ಗಾರ್ಡನ್, ಸಂಪಂಗಿರಾಮನಗರ, ಗಾಂಧಿನಗರ, ಮೆಜೆಸ್ಟಿಕ್, ಶಿವಾಜಿನಗರ, ಎಂ.ಜಿ.ರಸ್ತೆ, ಕೋರಮಂಗಲ, ಮಡಿವಾಳ, ಲಾಲ್ಬಾಗ್, ಅಶೋಕನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲೂ ಮಳೆ ಆಯಿತು.</p>.<p>ಮೆಜೆಸ್ಟಿಕ್ ರೈಲ್ವೆ ಕೆಳ ಸೇತುವೆ, ಓಕಳಿಪುರ ಕೆಳಸೇತುವೆ, ಕಸ್ತೂರಿ<br />ನಗರದ ಕೆಳ ಸೇತುವೆ, ಇತೆರೆಡೆ ಮೂರು ಅಡಿಗಿಂತ ಹೆಚ್ಚು ನೀರು ಹರಿಯಿತು. ಅದರಲ್ಲೇ ವಾಹನಗಳು ಸಂಚರಿಸಿದವು. ಕೆಲವು ಕೆಟ್ಟು ನಿಂತವು. ಅಂಥ ವಾಹನಗಳನ್ನು ಸ್ಥಳೀಯರೇ ತಳ್ಳಿ ದಡ ಮುಟ್ಟಿಸಿದರು.</p>.<p class="Subhead">ಮಾರುಕಟ್ಟೆ ಪ್ರದೇಶದಲ್ಲಿ ನೀರು...: ಮಾರುಕಟ್ಟೆ ಪ್ರದೇಶಗಳಾದ ಅವೆನ್ಯೂ ರಸ್ತೆ, ಚಿಕ್ಕಪೇಟೆ, ಬಿವಿಕೆ ಅಯ್ಯಂಗಾರ್ ರಸ್ತೆ, ಕೆಂಪೇಗೌಡ ರಸ್ತೆ, ಶಿವಾಜಿನಗರ ಹಾಗೂ ಇತರೆಡೆ ರಸ್ತೆಗಳಲ್ಲಿಯೇ ನೀರು ಧಾರಾಕಾರವಾಗಿ ಹರಿಯಿತು.</p>.<p>ಬಹುತೇಕ ಮಾರುಕಟ್ಟೆ ಪ್ರದೇಶಗಳಲ್ಲಿ ಹಲವು ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ರಸ್ತೆಯಲ್ಲೂ ಅಗೆಯಲಾಗಿದ್ದು, ಕಾಲುವೆಗಳೂ ಮುಚ್ಚಿವೆ. ಕಾಲುವೆಯಲ್ಲಿ ಹರಿಯಬೇಕಿರುವ ನೀರು ರಸ್ತೆಯಲ್ಲಿ ಹರಿದು, ವಾಹನ ಹಾಗೂ ಪಾದಚಾರಿಗಳ ಓಡಾಟಕ್ಕೆ ತೊಂದರೆ ಉಂಟಾಯಿತು.</p>.<p>ಭಾನುವಾರ ರಜೆ ದಿನವಾಗಿದ್ದರಿಂದ ಹಲವರು ಮಾರುಕಟ್ಟೆ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಧಾರಾಕಾರ ಮಳೆಯ ಕಾರಣ ಹೆಚ್ಚಿನವರು ಅಂಗಡಿಗಳಲ್ಲಿ ಆಶ್ರಯ ಪಡೆದಿದ್ದುದು ಕಂಡುಬಂತು.</p>.<p><strong>‘ಮೂರು ಕಡೆ ಉರುಳಿದ ಮರಗಳು’</strong></p>.<p>‘ಭಾನುವಾರ ಸಂಜೆಯೂ ನಗರದಲ್ಲಿ ಉತ್ತಮ ಮಳೆ ಆಯಿತು. ಮೂರು ಕಡೆ ರಸ್ತೆಗೆ ಮರಗಳು ಉರುಳಿದ್ದು, ಸಂಚಾರಕ್ಕೆ ತೊಂದರೆ ಆಗಿರುವ ಬಗ್ಗೆ ದೂರು ಬಂದಿವೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<p>‘ಆರ್.ಟಿ.ನಗರದ ಪಿಎನ್ಟಿ ಕಾಲೊನಿ, ಡಿ.ಜೆ.ಹಳ್ಳಿಯ ಆನಂದ ಸಿನಿಮಂದಿರ ಹಾಗೂ ಕೋರಮಂಗಲದ 8ನೇ ಹಂತದಲ್ಲಿ ಮರಗಳು ಉರುಳಿವೆ. ಸಿಬ್ಬಂದಿ ಸ್ಥಳಕ್ಕೆ ಹೋಗಿ ತೆರವು ಕಾರ್ಯ ನಡೆಸುತ್ತಿದ್ದಾರೆ’<br />ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದಲ್ಲಿ ಕೆಲ ದಿನಗಳಿಂದ ಬಿಡುವು ನೀಡುತ್ತಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಗುಡುಗು–ಸಿಡಿಲಿನ ಅಬ್ಬರವೂ ಜೋರಾಗಿದೆ.</p>.<p>ಶನಿವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಬಿಡುವು ನೀಡಿದ್ದ ಮಳೆ, ರಾತ್ರಿ ಜೋರಾಗಿ ಸುರಿಯಿತು. ಭಾನುವಾರವೂ ಬೆಳಿಗ್ಗೆಯಿಂದ ಸಂಜೆಯವರೆಗೂ ಮಳೆ ಇರಲಿಲ್ಲ. ರಾತ್ರಿ 8 ಗಂಟೆಯಿಂದ ಆರಂಭವಾದ ಮಳೆ, ತಡರಾತ್ರಿಯವರೆಗೂ ಸುರಿಯಿತು.</p>.<p>ಕಾಲುವೆಗಳು ತುಂಬಿ ಪ್ರಮುಖ ರಸ್ತೆಗಳ ಮೇಲೆಯೇ ನೀರು ಹೊಳೆಯಂತೆ ಹರಿಯಿತು. ತಗ್ಗು ಪ್ರದೇಶ<br />ಗಳಲ್ಲಿ ನೀರು ನಿಂತುಕೊಂಡ ದೃಶ್ಯಗಳು ಕಂಡುಬಂದವು.</p>.<p>ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಪೀಣ್ಯ,<br />ಲಗ್ಗೆರೆ, ನಂದಿನಿ ಲೇಔಟ್, ಮಲ್ಲೇಶ್ವರ, ಶೇಷಾದ್ರಿಪುರ, ಹೆಬ್ಬಾಳ, ಸಂಜಯನಗರ, ಆರ್.ಟಿ.ನಗರ, ನಾಗವಾರ, ಹೆಣ್ಣೂರು, ಬಾಣಸವಾಡಿ, ರಾಜರಾಜೇಶ್ವರಿನಗರ, ಕೆಂಗೇರಿ, ದೀಪಾಂಜಲಿನಗರ, ಚಾಮರಾಜಪೇಟೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಅಬ್ಬರವಿತ್ತು.</p>.<p>ಶಾಂತಿನಗರ, ವಿಲ್ಸನ್ ಗಾರ್ಡನ್, ಸಂಪಂಗಿರಾಮನಗರ, ಗಾಂಧಿನಗರ, ಮೆಜೆಸ್ಟಿಕ್, ಶಿವಾಜಿನಗರ, ಎಂ.ಜಿ.ರಸ್ತೆ, ಕೋರಮಂಗಲ, ಮಡಿವಾಳ, ಲಾಲ್ಬಾಗ್, ಅಶೋಕನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲೂ ಮಳೆ ಆಯಿತು.</p>.<p>ಮೆಜೆಸ್ಟಿಕ್ ರೈಲ್ವೆ ಕೆಳ ಸೇತುವೆ, ಓಕಳಿಪುರ ಕೆಳಸೇತುವೆ, ಕಸ್ತೂರಿ<br />ನಗರದ ಕೆಳ ಸೇತುವೆ, ಇತೆರೆಡೆ ಮೂರು ಅಡಿಗಿಂತ ಹೆಚ್ಚು ನೀರು ಹರಿಯಿತು. ಅದರಲ್ಲೇ ವಾಹನಗಳು ಸಂಚರಿಸಿದವು. ಕೆಲವು ಕೆಟ್ಟು ನಿಂತವು. ಅಂಥ ವಾಹನಗಳನ್ನು ಸ್ಥಳೀಯರೇ ತಳ್ಳಿ ದಡ ಮುಟ್ಟಿಸಿದರು.</p>.<p class="Subhead">ಮಾರುಕಟ್ಟೆ ಪ್ರದೇಶದಲ್ಲಿ ನೀರು...: ಮಾರುಕಟ್ಟೆ ಪ್ರದೇಶಗಳಾದ ಅವೆನ್ಯೂ ರಸ್ತೆ, ಚಿಕ್ಕಪೇಟೆ, ಬಿವಿಕೆ ಅಯ್ಯಂಗಾರ್ ರಸ್ತೆ, ಕೆಂಪೇಗೌಡ ರಸ್ತೆ, ಶಿವಾಜಿನಗರ ಹಾಗೂ ಇತರೆಡೆ ರಸ್ತೆಗಳಲ್ಲಿಯೇ ನೀರು ಧಾರಾಕಾರವಾಗಿ ಹರಿಯಿತು.</p>.<p>ಬಹುತೇಕ ಮಾರುಕಟ್ಟೆ ಪ್ರದೇಶಗಳಲ್ಲಿ ಹಲವು ದಿನಗಳಿಂದ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ ರಸ್ತೆಯಲ್ಲೂ ಅಗೆಯಲಾಗಿದ್ದು, ಕಾಲುವೆಗಳೂ ಮುಚ್ಚಿವೆ. ಕಾಲುವೆಯಲ್ಲಿ ಹರಿಯಬೇಕಿರುವ ನೀರು ರಸ್ತೆಯಲ್ಲಿ ಹರಿದು, ವಾಹನ ಹಾಗೂ ಪಾದಚಾರಿಗಳ ಓಡಾಟಕ್ಕೆ ತೊಂದರೆ ಉಂಟಾಯಿತು.</p>.<p>ಭಾನುವಾರ ರಜೆ ದಿನವಾಗಿದ್ದರಿಂದ ಹಲವರು ಮಾರುಕಟ್ಟೆ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಧಾರಾಕಾರ ಮಳೆಯ ಕಾರಣ ಹೆಚ್ಚಿನವರು ಅಂಗಡಿಗಳಲ್ಲಿ ಆಶ್ರಯ ಪಡೆದಿದ್ದುದು ಕಂಡುಬಂತು.</p>.<p><strong>‘ಮೂರು ಕಡೆ ಉರುಳಿದ ಮರಗಳು’</strong></p>.<p>‘ಭಾನುವಾರ ಸಂಜೆಯೂ ನಗರದಲ್ಲಿ ಉತ್ತಮ ಮಳೆ ಆಯಿತು. ಮೂರು ಕಡೆ ರಸ್ತೆಗೆ ಮರಗಳು ಉರುಳಿದ್ದು, ಸಂಚಾರಕ್ಕೆ ತೊಂದರೆ ಆಗಿರುವ ಬಗ್ಗೆ ದೂರು ಬಂದಿವೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<p>‘ಆರ್.ಟಿ.ನಗರದ ಪಿಎನ್ಟಿ ಕಾಲೊನಿ, ಡಿ.ಜೆ.ಹಳ್ಳಿಯ ಆನಂದ ಸಿನಿಮಂದಿರ ಹಾಗೂ ಕೋರಮಂಗಲದ 8ನೇ ಹಂತದಲ್ಲಿ ಮರಗಳು ಉರುಳಿವೆ. ಸಿಬ್ಬಂದಿ ಸ್ಥಳಕ್ಕೆ ಹೋಗಿ ತೆರವು ಕಾರ್ಯ ನಡೆಸುತ್ತಿದ್ದಾರೆ’<br />ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>