<p><strong>ಬೆಂಗಳೂರು:</strong> ನಗರದ ಹಲವೆಡೆ ಭಾನುವಾರ ಸಂಜೆ ಜೋರು ಮಳೆಯಾಗಿದ್ದು, ಹಲವು ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು.</p>.<p>ನಗರದಲ್ಲಿ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಭಾನುವಾರವೂ ಬೆಳಿಗ್ಗೆಯಿಂದ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ವೇಳೆ ಕೆಲವೆಡೆ ಮಾತ್ರ ಜಿಟಿ ಜಿಟಿ ಮಳೆಯಾಗಿತ್ತು. ಸಂಜೆ ವೇಳೆ ಮಳೆ ಜೋರಾಗಿ ಸುರಿಯಿತು.</p>.<p>ಆರ್.ಟಿ.ನಗರ, ಸಂಜಯನಗರ, ಹೆಬ್ಬಾಳ, ಅಮೃತಹಳ್ಳಿ, ಸದಾಶಿವನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಿತ್ತು. ಪೀಣ್ಯ, ಯಶವಂತಪುರ, ಮಲ್ಲೇಶ್ವರ, ಬಸವೇಶ್ವರನಗರ, ರಾಜಾಜಿನಗರ, ವಿಜಯನಗರ, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲೂ ಮಳೆ ಆಯಿತು.</p>.<p>‘ಶುಕ್ರವಾರ ರಾತ್ರಿಯೂ ನಗರದಲ್ಲಿ ಮಳೆ ಆಗಿತ್ತು. ಯಾವುದೇ ಹಾನಿ ಆಗಿರಲಿಲ್ಲ. ಭಾನುವಾರವೂ ಸಂಜೆ ಮಳೆ ಜೋರಾಗಿ ಸುರಿದಿದ್ದು, ರಸ್ತೆಯಲ್ಲಿ ಹೆಚ್ಚು ನೀರು ಹರಿದಿದೆ. ಈ ಬಗ್ಗೆ ದೂರುಗಳು ಹೆಚ್ಚಾಗಿ ಬಂದಿದ್ದ, ಸಿಬ್ಬಂದಿ ತ್ವರಿತವಾಗಿ ಸ್ಪಂದಿಸಿದ್ದಾರೆ. ಮರ ಬಿದ್ದ ಹಾಗೂ ಮಳೆಯಿಂದ ಹಾನಿಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಹಲವೆಡೆ ಭಾನುವಾರ ಸಂಜೆ ಜೋರು ಮಳೆಯಾಗಿದ್ದು, ಹಲವು ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು.</p>.<p>ನಗರದಲ್ಲಿ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಭಾನುವಾರವೂ ಬೆಳಿಗ್ಗೆಯಿಂದ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ವೇಳೆ ಕೆಲವೆಡೆ ಮಾತ್ರ ಜಿಟಿ ಜಿಟಿ ಮಳೆಯಾಗಿತ್ತು. ಸಂಜೆ ವೇಳೆ ಮಳೆ ಜೋರಾಗಿ ಸುರಿಯಿತು.</p>.<p>ಆರ್.ಟಿ.ನಗರ, ಸಂಜಯನಗರ, ಹೆಬ್ಬಾಳ, ಅಮೃತಹಳ್ಳಿ, ಸದಾಶಿವನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಿತ್ತು. ಪೀಣ್ಯ, ಯಶವಂತಪುರ, ಮಲ್ಲೇಶ್ವರ, ಬಸವೇಶ್ವರನಗರ, ರಾಜಾಜಿನಗರ, ವಿಜಯನಗರ, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲೂ ಮಳೆ ಆಯಿತು.</p>.<p>‘ಶುಕ್ರವಾರ ರಾತ್ರಿಯೂ ನಗರದಲ್ಲಿ ಮಳೆ ಆಗಿತ್ತು. ಯಾವುದೇ ಹಾನಿ ಆಗಿರಲಿಲ್ಲ. ಭಾನುವಾರವೂ ಸಂಜೆ ಮಳೆ ಜೋರಾಗಿ ಸುರಿದಿದ್ದು, ರಸ್ತೆಯಲ್ಲಿ ಹೆಚ್ಚು ನೀರು ಹರಿದಿದೆ. ಈ ಬಗ್ಗೆ ದೂರುಗಳು ಹೆಚ್ಚಾಗಿ ಬಂದಿದ್ದ, ಸಿಬ್ಬಂದಿ ತ್ವರಿತವಾಗಿ ಸ್ಪಂದಿಸಿದ್ದಾರೆ. ಮರ ಬಿದ್ದ ಹಾಗೂ ಮಳೆಯಿಂದ ಹಾನಿಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>