<figcaption>""</figcaption>.<p><strong>ಬೆಂಗಳೂರು: </strong>ಕೆಲದಿನಗಳಿಂದ ಬಿಸಿಲಿನತಾಪ ಹೆಚ್ಚಾಗಿದ್ದ ನಗರದಲ್ಲಿ ಸೋಮವಾರ ಸಂಜೆ ಗುಡುಗು ಸಿಡಿಲು ಸಹಿತವಾಗಿ ಧಾರಾಕಾರ ಮಳೆ ಸುರಿಯಿತು. ನಗರದ ಎಂಟು ಕಡೆಗಳಲ್ಲಿ ಮರಗಳು ನೆಲಕ್ಕುರುಳಿದವು.</p>.<p>ಕೊರೊನಾ ವೈರಾಣು ಹರಡುವಿಕೆ ತಡೆಯುವುದಕ್ಕಾಗಿ ನಗರವನ್ನು ಲಾಕ್ಡೌನ್ ಮಾಡಲಾಗಿದೆ. ಮನೆಯಲ್ಲಿರುವ ಜನ ಬಿಸಿಲಿನ ತಾಪದಿಂದ ಸುಸ್ತಾಗಿದ್ದರು. ಸಂಜೆ ಒಂದು ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆಯು ಜನರಿಗೆ ತಂಪಿನ ಅನುಭವ ನೀಡಿತು. </p>.<p>ಮಧ್ಯಾಹ್ನದಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಕೆಲ ಪ್ರದೇಶಗಳಲ್ಲಿ ಮಾತ್ರ ಸಂಜೆ ಜೋರು ಮಳೆ ಆಯಿತು. ರಾತ್ರಿ ಮತ್ತಷ್ಟು ಪ್ರದೇಶಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿತ್ತು. ಬಹುತೇಕ ಕಡೆ ರಸ್ತೆಗಳಲ್ಲಿ ನೀರು ಹರಿಯಿತು.</p>.<p>ಇಂದಿರಾನಗರ, ಹಲಸೂರು, ಎಂ.ಜಿ.ರಸ್ತೆ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ, ಪೀಣ್ಯ, ಸಂಪಂಗಿರಾಮನಗರ, ನಾಗರಬಾವಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಬನಶಂಕರಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಜೋರಾಗಿ ಸುರಿಯಿತು.</p>.<p>ವಿಜಯನಗರ, ನಾಗರಬಾವಿ, ಕಾಟನ್ಪೇಟೆ, ಬಸವೇಶ್ವರನಗರ, ರಾಜಾಜಿನಗರ ಸೇರಿ ನಗರದ 8 ಕಡೆಗಳಲ್ಲಿ ಮರಗಳು ಉರುಳಿಬಿದ್ದ ಬಗ್ಗೆಬಿಬಿಎಂಪಿ ಸಹಾಯವಾಣಿಗೆ ದೂರುಗಳು ಬಂದಿವೆ.</p>.<p>ನಿಷೇಧಾಜ್ಞೆ ನಡುವೆಯೂ ಕೆಲವರು ವಾಯುವಿಹಾರಕ್ಕೆಂದು ಮನೆಯಿಂದ ಹೊರಗೆ ಬಂದಿದ್ದರು. ಮಳೆ ಬರುತ್ತಿ<br />ದ್ದಂತೆ ವಾಪಸು ಮನೆ ಸೇರಿದರು.</p>.<p>ನಗರದಲ್ಲಿ ತೆರೆಯಲಾಗಿರುವ ಚೆಕ್ಪೋಸ್ಟ್ನಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸರು, ಅಕ್ಕ–ಪಕ್ಕದ ಕಟ್ಟಡಗಳಲ್ಲಿ ಆಶ್ರಯ ಪಡೆದಿದ್ದು ಕಂಡುಬಂತು. </p>.<p>ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ವಾಹನಗಳ ಸಂಚಾರ ಹಾಗೂ ಜನರ ಓಡಾಟ ವಿರಳವಾಗಿದೆ. ಹೀಗಾಗಿ, ಮಳೆ ಸಂಬಂಧಿತ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ದೂರುಗಳು ಬಂದಿಲ್ಲವೆಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು. </p>.<p class="Subhead"><strong>ವಿದ್ಯುತ್ ವ್ಯತ್ಯಯ: </strong>ಜೋರು ಮಳೆಯಿಂದಾಗಿ ರಾಜಾಜಿನಗರ, ಯಶವಂತಪುರ, ಪೀಣ್ಯ, ಲಗ್ಗೆರೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.</p>.<p><strong>ದಾಬಸ್ ಪೇಟೆ ಸುತ್ತಮುತ್ತ ಆಲಿಕಲ್ಲು ಮಳೆ</strong></p>.<p><strong>ದಾಬಸ್ ಪೇಟೆ: </strong>ದಾಬಸ್ ಪೇಟೆ ಸುತ್ತಮುತ್ತ ಸೋಮವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆಯಾಗಿದೆ.</p>.<p>ಬಿಲ್ಲಿನ ಕೋಟೆ, ಗುಂಡೇನಹಳ್ಳಿ, ಹೊಸಹಳ್ಳಿ, ಕೆಂಗಲ್ ಕೆಂಪೋಹಳ್ಳಿ ಭಾಗಗಳಲ್ಲಿ ಮಳೆಯೊಂದಿಗೆ ಆಲಿಕಲ್ಲು ಬಿದ್ದವು. ಚಿಕ್ಕ ಚಿಕ್ಕ ಗುಂಡಿಗಳಿಗೆ ನೀರು ಬಂದಿದೆ.</p>.<p>ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬಂತು. ಮಧ್ಯಾಹ್ನ 3ರ ಸುಮಾರಿಗೆ ಮಳೆ ಸುರಿಯಲಾರಂಭಿಸಿತು. ಮಳೆಯಿಂದ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಗೆ ನೀರು ನುಗ್ಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು: </strong>ಕೆಲದಿನಗಳಿಂದ ಬಿಸಿಲಿನತಾಪ ಹೆಚ್ಚಾಗಿದ್ದ ನಗರದಲ್ಲಿ ಸೋಮವಾರ ಸಂಜೆ ಗುಡುಗು ಸಿಡಿಲು ಸಹಿತವಾಗಿ ಧಾರಾಕಾರ ಮಳೆ ಸುರಿಯಿತು. ನಗರದ ಎಂಟು ಕಡೆಗಳಲ್ಲಿ ಮರಗಳು ನೆಲಕ್ಕುರುಳಿದವು.</p>.<p>ಕೊರೊನಾ ವೈರಾಣು ಹರಡುವಿಕೆ ತಡೆಯುವುದಕ್ಕಾಗಿ ನಗರವನ್ನು ಲಾಕ್ಡೌನ್ ಮಾಡಲಾಗಿದೆ. ಮನೆಯಲ್ಲಿರುವ ಜನ ಬಿಸಿಲಿನ ತಾಪದಿಂದ ಸುಸ್ತಾಗಿದ್ದರು. ಸಂಜೆ ಒಂದು ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆಯು ಜನರಿಗೆ ತಂಪಿನ ಅನುಭವ ನೀಡಿತು. </p>.<p>ಮಧ್ಯಾಹ್ನದಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಕೆಲ ಪ್ರದೇಶಗಳಲ್ಲಿ ಮಾತ್ರ ಸಂಜೆ ಜೋರು ಮಳೆ ಆಯಿತು. ರಾತ್ರಿ ಮತ್ತಷ್ಟು ಪ್ರದೇಶಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿತ್ತು. ಬಹುತೇಕ ಕಡೆ ರಸ್ತೆಗಳಲ್ಲಿ ನೀರು ಹರಿಯಿತು.</p>.<p>ಇಂದಿರಾನಗರ, ಹಲಸೂರು, ಎಂ.ಜಿ.ರಸ್ತೆ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ, ಪೀಣ್ಯ, ಸಂಪಂಗಿರಾಮನಗರ, ನಾಗರಬಾವಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಬನಶಂಕರಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಜೋರಾಗಿ ಸುರಿಯಿತು.</p>.<p>ವಿಜಯನಗರ, ನಾಗರಬಾವಿ, ಕಾಟನ್ಪೇಟೆ, ಬಸವೇಶ್ವರನಗರ, ರಾಜಾಜಿನಗರ ಸೇರಿ ನಗರದ 8 ಕಡೆಗಳಲ್ಲಿ ಮರಗಳು ಉರುಳಿಬಿದ್ದ ಬಗ್ಗೆಬಿಬಿಎಂಪಿ ಸಹಾಯವಾಣಿಗೆ ದೂರುಗಳು ಬಂದಿವೆ.</p>.<p>ನಿಷೇಧಾಜ್ಞೆ ನಡುವೆಯೂ ಕೆಲವರು ವಾಯುವಿಹಾರಕ್ಕೆಂದು ಮನೆಯಿಂದ ಹೊರಗೆ ಬಂದಿದ್ದರು. ಮಳೆ ಬರುತ್ತಿ<br />ದ್ದಂತೆ ವಾಪಸು ಮನೆ ಸೇರಿದರು.</p>.<p>ನಗರದಲ್ಲಿ ತೆರೆಯಲಾಗಿರುವ ಚೆಕ್ಪೋಸ್ಟ್ನಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸರು, ಅಕ್ಕ–ಪಕ್ಕದ ಕಟ್ಟಡಗಳಲ್ಲಿ ಆಶ್ರಯ ಪಡೆದಿದ್ದು ಕಂಡುಬಂತು. </p>.<p>ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ವಾಹನಗಳ ಸಂಚಾರ ಹಾಗೂ ಜನರ ಓಡಾಟ ವಿರಳವಾಗಿದೆ. ಹೀಗಾಗಿ, ಮಳೆ ಸಂಬಂಧಿತ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ದೂರುಗಳು ಬಂದಿಲ್ಲವೆಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು. </p>.<p class="Subhead"><strong>ವಿದ್ಯುತ್ ವ್ಯತ್ಯಯ: </strong>ಜೋರು ಮಳೆಯಿಂದಾಗಿ ರಾಜಾಜಿನಗರ, ಯಶವಂತಪುರ, ಪೀಣ್ಯ, ಲಗ್ಗೆರೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.</p>.<p><strong>ದಾಬಸ್ ಪೇಟೆ ಸುತ್ತಮುತ್ತ ಆಲಿಕಲ್ಲು ಮಳೆ</strong></p>.<p><strong>ದಾಬಸ್ ಪೇಟೆ: </strong>ದಾಬಸ್ ಪೇಟೆ ಸುತ್ತಮುತ್ತ ಸೋಮವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆಯಾಗಿದೆ.</p>.<p>ಬಿಲ್ಲಿನ ಕೋಟೆ, ಗುಂಡೇನಹಳ್ಳಿ, ಹೊಸಹಳ್ಳಿ, ಕೆಂಗಲ್ ಕೆಂಪೋಹಳ್ಳಿ ಭಾಗಗಳಲ್ಲಿ ಮಳೆಯೊಂದಿಗೆ ಆಲಿಕಲ್ಲು ಬಿದ್ದವು. ಚಿಕ್ಕ ಚಿಕ್ಕ ಗುಂಡಿಗಳಿಗೆ ನೀರು ಬಂದಿದೆ.</p>.<p>ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬಂತು. ಮಧ್ಯಾಹ್ನ 3ರ ಸುಮಾರಿಗೆ ಮಳೆ ಸುರಿಯಲಾರಂಭಿಸಿತು. ಮಳೆಯಿಂದ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಗೆ ನೀರು ನುಗ್ಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>