<p><strong>ಬೆಂಗಳೂರು:</strong> ನಗರದಲ್ಲಿ ಗುರುವಾರ ಸಂಜೆಯಿಂದ ರಾತ್ರಿಯವರೆಗೆ ಮಳೆ ಅಬ್ಬರಿಸಿ ಸುರಿಯಿತು. ಬಹುತೇಕ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು. ಹರಿಯುವ ನೀರಿನಲ್ಲೇ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಿದ್ದರಿಂದ, ಸಂಚಾರ ದಟ್ಟಣೆಯೂ ಉಂಟಾಯಿತು.</p>.<p>ಬುಧವಾರವೂ ಮಳೆ ಜೋರಾಗಿತ್ತು. ಗುರುವಾರ ಬೆಳಿಗ್ಗೆಯಿಂದ ಬಿಸಿಲು ಕಾಣಿಸಿಕೊಂಡಿತು. ಮಧ್ಯಾಹ್ನವೇ ಮೋಡ ಕವಿದ ವಾತಾವರಣವಿತ್ತು. ಹಲವೆಡೆ ಮಳೆಯೂ ಸುರಿಯಿತು. ಸಂಜೆಯಾಗುತ್ತಿದ್ದಂತೆ ಮಳೆ ಜೋರಾಯಿತು. ರಾತ್ರಿಯವರೆಗೂ ಮಳೆ ಆರ್ಭಟವಿತ್ತು.</p>.<p>ಮೆಜೆಸ್ಟಿಕ್, ಗಾಂಧಿನಗರ, ಹೆಬ್ಬಾಳ, ಆರ್.ಟಿ.ನಗರ, ಸಂಜಯನಗರ, ಶಿವಾಜಿನಗರ, ಅಶೋಕನಗರ, ಬೈಯಪ್ಪನಹಳ್ಳಿ, ರಾಮಮೂರ್ತಿನಗರ, ಬಾಣಸವಾಡಿ, ಎಚ್ಎಸ್ಆರ್ ಲೇಔಟ್, ಮಡಿವಾಳ, ಕೋರಮಂಗಲ, ಎಂ.ಜಿ. ರಸ್ತೆ, ವಸಂತನಗರ, ಸಂಪಂಗಿರಾಮನಗರ, ಹಲಸೂರು, ಬಸವನಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಹೊಸಕೆರೆಹಳ್ಳಿ, ಯಶವಂತಪುರ, ಪೀಣ್ಯ, ಮಲ್ಲೇಶ್ವರ, ವಿದ್ಯಾರಣ್ಯಪುರ, ದೊಡ್ಡಬೊಮ್ಮಸಂದ್ರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಆಯಿತು.</p>.<p>ನಗರದ ಬಹುತೇಕ ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ರಸ್ತೆಗಳನ್ನು ಅಗೆಯಲಾಗಿದೆ. ಈ ಜಾಗದಲ್ಲಿದ್ದ ತಗ್ಗುಗಳಲ್ಲಿ ನೀರು ನಿಂತುಕೊಂಡಿತ್ತು. ನಡೆದುಕೊಂಡು ಹೋಗಲು ಪಾದಚಾರಿಗಳಿಗೆ ತೊಂದರೆಯಾಯಿತು.</p>.<p>ಮೆಜೆಸ್ಟಿಕ್, ಕೆ.ಆರ್. ವೃತ್ತ, ಕಾರ್ಪೋರೇಷನ್ ವೃತ್ತ, ಹಳೇ ಮದ್ರಾಸ್ ರಸ್ತೆ, ರಾಜಾಜಿನಗರ ಪಶ್ಚಿಮ ಕಾರ್ಡ್ ರಸ್ತೆ, ಯಶವಂತಪುರ, ಹೊಸೂರು ರಸ್ತೆಯ ಡೈರಿ ವೃತ್ತ ಹಾಗೂ ಲಾಲ್ಬಾಗ್ ಮುಖ್ಯರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಿತ್ತು. ಶಿವಾನಂದ ವೃತ್ತದ ರೈಲ್ವೆ ಕೆಳಸೇತುವೆ, ಓಕಳಿಪುರ ಕೆಳ ಸೇತುವೆಗಳಲ್ಲಿ 4 ಅಡಿಯಷ್ಟು ನೀರು ಹರಿಯಿತು.</p>.<p>‘ನಗರದ ಬಹುತೇಕ ಕಡೆ ಮಳೆ ಆಗಿದೆ. ಹೆಚ್ಚು ಹಾನಿಯಾದ ಬಗ್ಗೆ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಗುರುವಾರ ಸಂಜೆಯಿಂದ ರಾತ್ರಿಯವರೆಗೆ ಮಳೆ ಅಬ್ಬರಿಸಿ ಸುರಿಯಿತು. ಬಹುತೇಕ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು. ಹರಿಯುವ ನೀರಿನಲ್ಲೇ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಿದ್ದರಿಂದ, ಸಂಚಾರ ದಟ್ಟಣೆಯೂ ಉಂಟಾಯಿತು.</p>.<p>ಬುಧವಾರವೂ ಮಳೆ ಜೋರಾಗಿತ್ತು. ಗುರುವಾರ ಬೆಳಿಗ್ಗೆಯಿಂದ ಬಿಸಿಲು ಕಾಣಿಸಿಕೊಂಡಿತು. ಮಧ್ಯಾಹ್ನವೇ ಮೋಡ ಕವಿದ ವಾತಾವರಣವಿತ್ತು. ಹಲವೆಡೆ ಮಳೆಯೂ ಸುರಿಯಿತು. ಸಂಜೆಯಾಗುತ್ತಿದ್ದಂತೆ ಮಳೆ ಜೋರಾಯಿತು. ರಾತ್ರಿಯವರೆಗೂ ಮಳೆ ಆರ್ಭಟವಿತ್ತು.</p>.<p>ಮೆಜೆಸ್ಟಿಕ್, ಗಾಂಧಿನಗರ, ಹೆಬ್ಬಾಳ, ಆರ್.ಟಿ.ನಗರ, ಸಂಜಯನಗರ, ಶಿವಾಜಿನಗರ, ಅಶೋಕನಗರ, ಬೈಯಪ್ಪನಹಳ್ಳಿ, ರಾಮಮೂರ್ತಿನಗರ, ಬಾಣಸವಾಡಿ, ಎಚ್ಎಸ್ಆರ್ ಲೇಔಟ್, ಮಡಿವಾಳ, ಕೋರಮಂಗಲ, ಎಂ.ಜಿ. ರಸ್ತೆ, ವಸಂತನಗರ, ಸಂಪಂಗಿರಾಮನಗರ, ಹಲಸೂರು, ಬಸವನಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಹೊಸಕೆರೆಹಳ್ಳಿ, ಯಶವಂತಪುರ, ಪೀಣ್ಯ, ಮಲ್ಲೇಶ್ವರ, ವಿದ್ಯಾರಣ್ಯಪುರ, ದೊಡ್ಡಬೊಮ್ಮಸಂದ್ರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಆಯಿತು.</p>.<p>ನಗರದ ಬಹುತೇಕ ರಸ್ತೆಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ರಸ್ತೆಗಳನ್ನು ಅಗೆಯಲಾಗಿದೆ. ಈ ಜಾಗದಲ್ಲಿದ್ದ ತಗ್ಗುಗಳಲ್ಲಿ ನೀರು ನಿಂತುಕೊಂಡಿತ್ತು. ನಡೆದುಕೊಂಡು ಹೋಗಲು ಪಾದಚಾರಿಗಳಿಗೆ ತೊಂದರೆಯಾಯಿತು.</p>.<p>ಮೆಜೆಸ್ಟಿಕ್, ಕೆ.ಆರ್. ವೃತ್ತ, ಕಾರ್ಪೋರೇಷನ್ ವೃತ್ತ, ಹಳೇ ಮದ್ರಾಸ್ ರಸ್ತೆ, ರಾಜಾಜಿನಗರ ಪಶ್ಚಿಮ ಕಾರ್ಡ್ ರಸ್ತೆ, ಯಶವಂತಪುರ, ಹೊಸೂರು ರಸ್ತೆಯ ಡೈರಿ ವೃತ್ತ ಹಾಗೂ ಲಾಲ್ಬಾಗ್ ಮುಖ್ಯರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಿತ್ತು. ಶಿವಾನಂದ ವೃತ್ತದ ರೈಲ್ವೆ ಕೆಳಸೇತುವೆ, ಓಕಳಿಪುರ ಕೆಳ ಸೇತುವೆಗಳಲ್ಲಿ 4 ಅಡಿಯಷ್ಟು ನೀರು ಹರಿಯಿತು.</p>.<p>‘ನಗರದ ಬಹುತೇಕ ಕಡೆ ಮಳೆ ಆಗಿದೆ. ಹೆಚ್ಚು ಹಾನಿಯಾದ ಬಗ್ಗೆ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>