ಹೊರಮಾವು, ಎಚ್ಬಿಆರ್ ಲೇಔಟ್, ಸಹಕಾರ ನಗರ, ಚಿಕ್ಕಬಾಣಾವರ, ರಾಮಮೂರ್ತಿ ನಗರ, ಹೆಣ್ಣೂರು ಸುತ್ತಮುತ್ತಲ ಬಡಾವಣೆಗಳ ಮನೆಗಳು ಜಲಾವೃತಗೊಂಡಿದ್ದವು. ಚಿಕ್ಕಬಾಣಾವರ ಕೆರೆ ಕೋಡಿ ತುಂಬಿ ಹರಿದು ನೂರಾರು ಮನೆಗಳು ಜಲಾವೃತಗೊಂಡವು.ಮನೆಯ ಮುಂದೆ ನಿಲ್ಲಿಸಿದ್ದ ಕಾರು ಮತ್ತು ಬೈಕ್ಗಳು ನೀರಿನಲ್ಲಿ ತೇಲಾಡಿದವು. ಅಂಗಡಿ– ಮುಂಗಟ್ಟುಗಳಿಗೂ ನುಗ್ಗಿದ್ದ ನೀರನ್ನು ಜನ ದಿನವಿಡೀ ಹೊರ ಹಾಕಿದರು.