<p><strong>ಬೆಂಗಳೂರು: </strong>ನಗರದ ಬಹುತೇಕ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಜೋರು ಮಳೆ ಸುರಿಯಿತು. ಅಲ್ಲಲ್ಲಿ ಗುಡುಗು– ಸಿಡಿಲಿನ ಅಬ್ಬರವೂ ಇತ್ತು.</p>.<p>ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ಹಾಗೂ ಚಳಿ ವಾತಾವರಣವಿತ್ತು. ಸಂಜೆ 5ರ ನಂತರ ಹಲವೆಡೆ ಜಿಟಿ ಜಿಟಿಯಾಗಿ ಮಳೆ ಸುರಿಯಲಾರಂಭಿಸಿತು. ಕೆಲ ನಿಮಿಷಗಳಲ್ಲೇ ಮಳೆ ಜೋರಾಗಿ ಸುರಿದು, ರಸ್ತೆಯಲ್ಲೇ ನೀರು ಹರಿಯುವಂತಾಯಿತು.</p>.<p>ಮೆಜೆಸ್ಟಿಕ್, ಗಾಂಧಿನಗರ, ಕಾರ್ಪೋರೇಷನ್ ವೃತ್ತ, ಚಾಮರಾಜಪೇಟೆ, ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ, ವಿದ್ಯಾರಣ್ಯಪುರ, ಬಿಇಎಲ್ ವೃತ್ತ, ಗೊರಗುಂಟೆಪಾಳ್ಯ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ಬನಶಂಕರಿ, ಕತ್ರಿಗುಪ್ಪೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಅಬ್ಬರ ಜೋರಾಗಿತ್ತು.</p>.<p>ಪ್ರಮುಖ ರಸ್ತೆಗಳಲ್ಲಿ ಎರಡು ಅಡಿಯಷ್ಟು ನೀರು ಹರಿಯಿತು. ಅದರಲ್ಲೇ ವಾಹನಗಳು ಸಂಚರಿಸಿದವು. ಕೆಲ ವಾಹನಗಳು ನೀರಿನಲ್ಲೇ ಕೆಟ್ಟು ನಿಂತವು.</p>.<p>ಸಂಜೆ ಕೆಲಸ ಮುಗಿಸಿ ಬಹುತೇಕರು ಮನೆಯತ್ತ ಹೊರಟಿದ್ದರು. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದವು. ಮೆಜೆಸ್ಟಿಕ್, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಾಹನಗಳ ದಟ್ಟಣೆಯೂ ಉಂಟಾಯಿತು.</p>.<p>‘ನಗರದ ಬಹುತೇಕ ಕಡೆ ಮಳೆ ಆಗಿದೆ. ರಸ್ತೆಯಲ್ಲಿ ನೀರು ನಿಂತಿದ್ದ ದೂರುಗಳು ಬಿಟ್ಟರೆ, ಬೇರೆ ಯಾವ ದೂರುಗಳು ಬಂದಿಲ್ಲ. ಅಂಥ ಕಡೆಗಳಲ್ಲಿ ಸಿಬ್ಬಂದಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ನೀರು ಮುಂದಕ್ಕೆ ಹೋಗಲು ದಾರಿ ಮಾಡಿಕೊಟ್ಟಿದ್ದಾರೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಬಹುತೇಕ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಜೋರು ಮಳೆ ಸುರಿಯಿತು. ಅಲ್ಲಲ್ಲಿ ಗುಡುಗು– ಸಿಡಿಲಿನ ಅಬ್ಬರವೂ ಇತ್ತು.</p>.<p>ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ಹಾಗೂ ಚಳಿ ವಾತಾವರಣವಿತ್ತು. ಸಂಜೆ 5ರ ನಂತರ ಹಲವೆಡೆ ಜಿಟಿ ಜಿಟಿಯಾಗಿ ಮಳೆ ಸುರಿಯಲಾರಂಭಿಸಿತು. ಕೆಲ ನಿಮಿಷಗಳಲ್ಲೇ ಮಳೆ ಜೋರಾಗಿ ಸುರಿದು, ರಸ್ತೆಯಲ್ಲೇ ನೀರು ಹರಿಯುವಂತಾಯಿತು.</p>.<p>ಮೆಜೆಸ್ಟಿಕ್, ಗಾಂಧಿನಗರ, ಕಾರ್ಪೋರೇಷನ್ ವೃತ್ತ, ಚಾಮರಾಜಪೇಟೆ, ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ, ವಿದ್ಯಾರಣ್ಯಪುರ, ಬಿಇಎಲ್ ವೃತ್ತ, ಗೊರಗುಂಟೆಪಾಳ್ಯ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ಬನಶಂಕರಿ, ಕತ್ರಿಗುಪ್ಪೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಅಬ್ಬರ ಜೋರಾಗಿತ್ತು.</p>.<p>ಪ್ರಮುಖ ರಸ್ತೆಗಳಲ್ಲಿ ಎರಡು ಅಡಿಯಷ್ಟು ನೀರು ಹರಿಯಿತು. ಅದರಲ್ಲೇ ವಾಹನಗಳು ಸಂಚರಿಸಿದವು. ಕೆಲ ವಾಹನಗಳು ನೀರಿನಲ್ಲೇ ಕೆಟ್ಟು ನಿಂತವು.</p>.<p>ಸಂಜೆ ಕೆಲಸ ಮುಗಿಸಿ ಬಹುತೇಕರು ಮನೆಯತ್ತ ಹೊರಟಿದ್ದರು. ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದವು. ಮೆಜೆಸ್ಟಿಕ್, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಾಹನಗಳ ದಟ್ಟಣೆಯೂ ಉಂಟಾಯಿತು.</p>.<p>‘ನಗರದ ಬಹುತೇಕ ಕಡೆ ಮಳೆ ಆಗಿದೆ. ರಸ್ತೆಯಲ್ಲಿ ನೀರು ನಿಂತಿದ್ದ ದೂರುಗಳು ಬಿಟ್ಟರೆ, ಬೇರೆ ಯಾವ ದೂರುಗಳು ಬಂದಿಲ್ಲ. ಅಂಥ ಕಡೆಗಳಲ್ಲಿ ಸಿಬ್ಬಂದಿ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ನೀರು ಮುಂದಕ್ಕೆ ಹೋಗಲು ದಾರಿ ಮಾಡಿಕೊಟ್ಟಿದ್ದಾರೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>