<p><strong>ಪೀಣ್ಯ ದಾಸರಹಳ್ಳಿ:</strong> ಸೋಮವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ರಾಜಗೋಪಾಲನಗರ ವಾರ್ಡ್ ಬಸಪ್ಪನ ಕಟ್ಟೆ ಹಿಂಭಾಗದ ಭೈರವೇಶ್ವರ ನಗರದಲ್ಲಿರುವ ರಾಜಕಾಲುವೆ ಉಕ್ಕಿ ಹರಿದು ರಸ್ತೆ ಮತ್ತು ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.</p>.<p>'150ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ, ಪೀಠೋಪಕರಣಗಳು ಹಾಳಾಗಿವೆ. ರಾತ್ರಿಯಿಂದ ನೀರನ್ನು ಹೊರಗೆ ಹಾಕಿ ಸಾಕಾಗಿದೆ' ಎಂದು ಸ್ಥಳೀಯ ನಿವಾಸಿ ಜಿ.ವಿ.ದೊಡ್ಡ ನಾಗಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪಾರ್ಕ್ನಲ್ಲಿದ್ದ ಮರಗಳ ಕೊಂಬೆಗಳನ್ನು ಕಡಿದು ಭೈರವೇಶ್ವರ ನಗರದ 2ನೇ ಎ ಮುಖ್ಯರಸ್ತೆಯಲ್ಲಿರುವ ಈ ರಾಜಕಾಲುವೆಯಲ್ಲಿ ಹಾಕಲಾಗಿದೆ. ಈವರೆಗೆ ಅವುಗಳನ್ನು ತೆರವುಗೊಳಿಸಿಲ್ಲ. ಹೀಗಾಗಿ ಮಳೆ ನೀರು ಸರಾಗವಾಗಿ ಹರಿಯದೆ ಅಂಗಡಿಗಳಿಗೆ, ಅಕ್ಕಪಕ್ಕದ ಮನೆಗಳಿಗೆಲ್ಲ ನುಗ್ಗಿದೆ. ವಿದ್ಯುತ್ ಸಂಪರ್ಕವೂ ಕಡಿತವಾಗಿದೆ' ಎಂದು ಅಂಗಡಿ ಮಾಲೀಕ ಹಾಲಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ಇಲ್ಲಿವರೆಗೂ ಅಧಿಕಾರಿಗಳು ಈ ಕಡೆ ಬಂದಿರಲಿಲ್ಲ. ಈಗ ಅಧಿಕಾರಿಗಳು ಬಂದು ರಾಜಕಾಲುವೆಯಲ್ಲಿದ್ದ ಕೊಂಬೆಗಳನ್ನು ತೆಗೆದಿದ್ದಾರೆ. ರಸ್ತೆ, ಮೋರಿಯಲ್ಲಿದ್ದ ನೀರು ಈಗ ಹರಿಯುತ್ತಿದೆ. ಆದರೂ ಕೂಡ ರಸ್ತೆಯೆಲ್ಲ ಕೆಸರುಮಯ. ಓಡಾಡಲು ತೊಂದರೆಯಾಗಿದೆ' ಎಂದು ಸ್ಥಳೀಯ ನಿವಾಸಿ ಅಣ್ಣಯ್ಯಪ್ಪ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಸೋಮವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ರಾಜಗೋಪಾಲನಗರ ವಾರ್ಡ್ ಬಸಪ್ಪನ ಕಟ್ಟೆ ಹಿಂಭಾಗದ ಭೈರವೇಶ್ವರ ನಗರದಲ್ಲಿರುವ ರಾಜಕಾಲುವೆ ಉಕ್ಕಿ ಹರಿದು ರಸ್ತೆ ಮತ್ತು ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು.</p>.<p>'150ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ, ಪೀಠೋಪಕರಣಗಳು ಹಾಳಾಗಿವೆ. ರಾತ್ರಿಯಿಂದ ನೀರನ್ನು ಹೊರಗೆ ಹಾಕಿ ಸಾಕಾಗಿದೆ' ಎಂದು ಸ್ಥಳೀಯ ನಿವಾಸಿ ಜಿ.ವಿ.ದೊಡ್ಡ ನಾಗಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪಾರ್ಕ್ನಲ್ಲಿದ್ದ ಮರಗಳ ಕೊಂಬೆಗಳನ್ನು ಕಡಿದು ಭೈರವೇಶ್ವರ ನಗರದ 2ನೇ ಎ ಮುಖ್ಯರಸ್ತೆಯಲ್ಲಿರುವ ಈ ರಾಜಕಾಲುವೆಯಲ್ಲಿ ಹಾಕಲಾಗಿದೆ. ಈವರೆಗೆ ಅವುಗಳನ್ನು ತೆರವುಗೊಳಿಸಿಲ್ಲ. ಹೀಗಾಗಿ ಮಳೆ ನೀರು ಸರಾಗವಾಗಿ ಹರಿಯದೆ ಅಂಗಡಿಗಳಿಗೆ, ಅಕ್ಕಪಕ್ಕದ ಮನೆಗಳಿಗೆಲ್ಲ ನುಗ್ಗಿದೆ. ವಿದ್ಯುತ್ ಸಂಪರ್ಕವೂ ಕಡಿತವಾಗಿದೆ' ಎಂದು ಅಂಗಡಿ ಮಾಲೀಕ ಹಾಲಪ್ಪ ಬೇಸರ ವ್ಯಕ್ತಪಡಿಸಿದರು.</p>.<p>‘ಇಲ್ಲಿವರೆಗೂ ಅಧಿಕಾರಿಗಳು ಈ ಕಡೆ ಬಂದಿರಲಿಲ್ಲ. ಈಗ ಅಧಿಕಾರಿಗಳು ಬಂದು ರಾಜಕಾಲುವೆಯಲ್ಲಿದ್ದ ಕೊಂಬೆಗಳನ್ನು ತೆಗೆದಿದ್ದಾರೆ. ರಸ್ತೆ, ಮೋರಿಯಲ್ಲಿದ್ದ ನೀರು ಈಗ ಹರಿಯುತ್ತಿದೆ. ಆದರೂ ಕೂಡ ರಸ್ತೆಯೆಲ್ಲ ಕೆಸರುಮಯ. ಓಡಾಡಲು ತೊಂದರೆಯಾಗಿದೆ' ಎಂದು ಸ್ಥಳೀಯ ನಿವಾಸಿ ಅಣ್ಣಯ್ಯಪ್ಪ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>