<p><strong>ಬೆಂಗಳೂರು</strong>: ನಗರದಲ್ಲಿ ಗುರುವಾರ ರಾತ್ರಿ ಜೋರು ಮಳೆ ಸುರಿದಿದ್ದು, ಬಹುತೇಕ ಕಡೆ ರಸ್ತೆಗಳಲ್ಲಿ ನೀರು ಹೊಳೆಯಂತೆ ಹರಿಯಿತು. ಕಾಟನ್ಪೇಟೆಯ ಛಲವಾದಿ ಪಾಳ್ಯದ ಕೆಲ ಮನೆಗಳಿಗೆ ನೀರು ನುಗ್ಗಿತ್ತು.</p>.<p>ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ, ಮೋಡ ಕವಿದ ವಾತಾವರಣದಿಂದಾಗಿ ಆಗಾಗ ಮುನ್ಸೂಚನೆ ನೀಡುತ್ತಿತ್ತು. ಗುರುವಾರವೂ ಬೆಳಿಗ್ಗೆಯಿಂದ ನಗರದ ಹಲವೆಡೆ ಬಿಸಿಲು ಇತ್ತು. ನಂತರ, ಮೋಡ ಕವಿದ ವಾತಾವರಣವೂ ಕಾಣಿಸಿಕೊಂಡಿತ್ತು.</p>.<p>ನಗರದ ಹಲವೆಡೆ ಸಂಜೆಯಿಂದಲೇ ಜಿಟಿ ಜಿಟಿ ಮಳೆ ಸುರಿಯಲಾರಂಭಿಸಿತ್ತು. ಬಹುತೇಕ ಕಡೆ ರಾತ್ರಿ ಮಳೆ ಅಬ್ಬರಿಸಿ ಸುರಿಯಿತು, ಎರಡು ಗಂಟೆ ನಿರಂತರವಾಗಿ ಸುರಿದ ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನೀರು ಧಾರಾಕಾರವಾಗಿ ಹರಿಯಿತು.</p>.<p>ರಾಜಾಜಿನಗರ, ವಿಜಯನಗರ, ದೀಪಾಂಜಲಿನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಗಿರಿನಗರ, ಹೊಸಕೆರೆಹಳ್ಳಿ, ಹನುಮಂತನಗರ, ಚಾಮರಾಜಪೇಟೆ, ಮೆಜೆಸ್ಟಿಕ್, ಗಾಂಧಿನಗರ, ಚಿಕ್ಕಪೇಟೆ, ಶೇಷಾದ್ರಿಪುರ, ಮಲ್ಲೇಶ್ವರ, ಯಶವಂತಪುರ, ಪೀಣ್ಯ, ದಾಸರಹಳ್ಳಿ, ಗೊರಗುಂಟೆಪಾಳ್ಯ ಹಾಗೂ ಸುತ್ತಮುತ್ತ ಮಳೆ ಅಬ್ಬರ ಹೆಚ್ಚಿತ್ತು.</p>.<p>ಎಂ.ಜಿ. ರಸ್ತೆ, ಅಶೋಕನಗರ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಕೋರಮಂಗಲ, ವಿವೇಕನಗರ, ಮಡಿವಾಳ, ಎಚ್ಎಸ್ಆರ್ ಲೇಔಟ್ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲೂ ಉತ್ತಮ ಮಳೆ ಆಯಿತು.</p>.<p>ದೀಪಾವಳಿ ಹಬ್ಬದ ಆಚರಣೆಯಲ್ಲಿದ್ದ ಜನ, ಅಗತ್ಯ ವಸ್ತುಗಳ ಖರೀದಿ<br />ಗಾಗಿ ಮಾರುಕಟ್ಟೆಗಳಿಗೆ ಬಂದಿದ್ದರು. ಇದೇ ಸಂದರ್ಭದಲ್ಲೇ ಮಳೆ ಸುರಿಯಲಾರಂಭಿಸಿತ್ತು. ಪ್ರತಿಯೊಂದು ಅಂಗಡಿ ಹಾಗೂ ಮಳಿಗೆಗಳಲ್ಲಿ ಜನರು<br />ಆಶ್ರಯ ಪಡೆದಿತ್ತು ಕಂಡುಬಂತು.</p>.<p>ರಸ್ತೆಯ ಅಕ್ಕ–ಪಕ್ಕದಲ್ಲಿ ವಾಹನ ನಿಲ್ಲಿಸಿದ್ದ ಸವಾರರು ಸಹ ಮಳಿಗೆಗಳಲ್ಲಿ ಆಶ್ರಯ ಪಡೆದಿದ್ದರು. ಸುರಿವ ಮಳೆಯಲ್ಲೇ ಕಾರು, ಬಸ್ ಹಾಗೂ ಇತರೆ ವಾಹನಗಳು ಸಂಚರಿಸಿದವು. ಕೆಲ ವಾಹನಗಳು ಕೆಟ್ಟು ನಿಂತಿದ್ದವು.</p>.<p>ಶಿವಾನಂದ ವೃತ್ತದ ಕೆಳ ಸೇತುವೆ ಹಾಗೂ ಮೆಜೆಸ್ಟಿಕ್ ಕೆಳ ಸೇತುವೆಯಲ್ಲಿ ನೀರು ಹರಿಯುವಿಕೆ ಹೆಚ್ಚಿತ್ತು. ಅದರಲ್ಲೇ ವಾಹನಗಳು ಸಂಚರಿಸಿದವು. ಕೆಲ ವಾಹನಗಳು ಕೆಟ್ಟು ನಿಂತಿದ್ದ ದೃಶ್ಯಗಳೂ ಕಾಣಿಸಿದವು.</p>.<p>ಛಲವಾದಿಪಾಳ್ಯದ ಕೆಲವೆಡೆ ಒಳರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯಿತು. ಅದೇ ನೀರು ಮನೆಗಳಿಗೆ ನುಗ್ಗಿತ್ತು. ನಿವಾಸಿಗಳು, ರಾತ್ರಿಯೀರಿ ನೀರು ಹೊರಹಾಕಿದರು.</p>.<p>‘ಗುರುವಾರ ಸಂಜೆಯಿಂದ ರಾತ್ರಿಯವರೆಗೂ ನಗರದಲ್ಲಿ ಉತ್ತಮ ಮಳೆ ಆಗಿದೆ. ರಸ್ತೆಯಲ್ಲಿ ನೀರು ಹರಿಯುತ್ತಿದ್ದ ಹಾಗೂ ಮರದ ಕೊಂಬೆಗಳು ಬಿದ್ದಿದ್ದ ದೂರುಗಳು ಬಂದಿದ್ದವು. ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಸರಿಪಡಿಸಲಾಗಿದೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<p>ಮೈದಾನಕ್ಕೆ ನೀರು: ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ನೀರು ನುಗ್ಗಿತ್ತು. ದೀಪಾವಳಿ ಹಬ್ಬಕ್ಕೆಂದು ಮೈದಾನದಲ್ಲಿ ಪಟಾಕಿ ಮಳಿಗೆ ತೆರೆಯಲಾಗಿತ್ತು. ಮಳಿಗೆಗಳಿಗೆ ನೀರು ನುಗ್ಗಿ, ಪಟಾಕಿಗಳು ತೊಯ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಗುರುವಾರ ರಾತ್ರಿ ಜೋರು ಮಳೆ ಸುರಿದಿದ್ದು, ಬಹುತೇಕ ಕಡೆ ರಸ್ತೆಗಳಲ್ಲಿ ನೀರು ಹೊಳೆಯಂತೆ ಹರಿಯಿತು. ಕಾಟನ್ಪೇಟೆಯ ಛಲವಾದಿ ಪಾಳ್ಯದ ಕೆಲ ಮನೆಗಳಿಗೆ ನೀರು ನುಗ್ಗಿತ್ತು.</p>.<p>ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ, ಮೋಡ ಕವಿದ ವಾತಾವರಣದಿಂದಾಗಿ ಆಗಾಗ ಮುನ್ಸೂಚನೆ ನೀಡುತ್ತಿತ್ತು. ಗುರುವಾರವೂ ಬೆಳಿಗ್ಗೆಯಿಂದ ನಗರದ ಹಲವೆಡೆ ಬಿಸಿಲು ಇತ್ತು. ನಂತರ, ಮೋಡ ಕವಿದ ವಾತಾವರಣವೂ ಕಾಣಿಸಿಕೊಂಡಿತ್ತು.</p>.<p>ನಗರದ ಹಲವೆಡೆ ಸಂಜೆಯಿಂದಲೇ ಜಿಟಿ ಜಿಟಿ ಮಳೆ ಸುರಿಯಲಾರಂಭಿಸಿತ್ತು. ಬಹುತೇಕ ಕಡೆ ರಾತ್ರಿ ಮಳೆ ಅಬ್ಬರಿಸಿ ಸುರಿಯಿತು, ಎರಡು ಗಂಟೆ ನಿರಂತರವಾಗಿ ಸುರಿದ ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನೀರು ಧಾರಾಕಾರವಾಗಿ ಹರಿಯಿತು.</p>.<p>ರಾಜಾಜಿನಗರ, ವಿಜಯನಗರ, ದೀಪಾಂಜಲಿನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಗಿರಿನಗರ, ಹೊಸಕೆರೆಹಳ್ಳಿ, ಹನುಮಂತನಗರ, ಚಾಮರಾಜಪೇಟೆ, ಮೆಜೆಸ್ಟಿಕ್, ಗಾಂಧಿನಗರ, ಚಿಕ್ಕಪೇಟೆ, ಶೇಷಾದ್ರಿಪುರ, ಮಲ್ಲೇಶ್ವರ, ಯಶವಂತಪುರ, ಪೀಣ್ಯ, ದಾಸರಹಳ್ಳಿ, ಗೊರಗುಂಟೆಪಾಳ್ಯ ಹಾಗೂ ಸುತ್ತಮುತ್ತ ಮಳೆ ಅಬ್ಬರ ಹೆಚ್ಚಿತ್ತು.</p>.<p>ಎಂ.ಜಿ. ರಸ್ತೆ, ಅಶೋಕನಗರ, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಕೋರಮಂಗಲ, ವಿವೇಕನಗರ, ಮಡಿವಾಳ, ಎಚ್ಎಸ್ಆರ್ ಲೇಔಟ್ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲೂ ಉತ್ತಮ ಮಳೆ ಆಯಿತು.</p>.<p>ದೀಪಾವಳಿ ಹಬ್ಬದ ಆಚರಣೆಯಲ್ಲಿದ್ದ ಜನ, ಅಗತ್ಯ ವಸ್ತುಗಳ ಖರೀದಿ<br />ಗಾಗಿ ಮಾರುಕಟ್ಟೆಗಳಿಗೆ ಬಂದಿದ್ದರು. ಇದೇ ಸಂದರ್ಭದಲ್ಲೇ ಮಳೆ ಸುರಿಯಲಾರಂಭಿಸಿತ್ತು. ಪ್ರತಿಯೊಂದು ಅಂಗಡಿ ಹಾಗೂ ಮಳಿಗೆಗಳಲ್ಲಿ ಜನರು<br />ಆಶ್ರಯ ಪಡೆದಿತ್ತು ಕಂಡುಬಂತು.</p>.<p>ರಸ್ತೆಯ ಅಕ್ಕ–ಪಕ್ಕದಲ್ಲಿ ವಾಹನ ನಿಲ್ಲಿಸಿದ್ದ ಸವಾರರು ಸಹ ಮಳಿಗೆಗಳಲ್ಲಿ ಆಶ್ರಯ ಪಡೆದಿದ್ದರು. ಸುರಿವ ಮಳೆಯಲ್ಲೇ ಕಾರು, ಬಸ್ ಹಾಗೂ ಇತರೆ ವಾಹನಗಳು ಸಂಚರಿಸಿದವು. ಕೆಲ ವಾಹನಗಳು ಕೆಟ್ಟು ನಿಂತಿದ್ದವು.</p>.<p>ಶಿವಾನಂದ ವೃತ್ತದ ಕೆಳ ಸೇತುವೆ ಹಾಗೂ ಮೆಜೆಸ್ಟಿಕ್ ಕೆಳ ಸೇತುವೆಯಲ್ಲಿ ನೀರು ಹರಿಯುವಿಕೆ ಹೆಚ್ಚಿತ್ತು. ಅದರಲ್ಲೇ ವಾಹನಗಳು ಸಂಚರಿಸಿದವು. ಕೆಲ ವಾಹನಗಳು ಕೆಟ್ಟು ನಿಂತಿದ್ದ ದೃಶ್ಯಗಳೂ ಕಾಣಿಸಿದವು.</p>.<p>ಛಲವಾದಿಪಾಳ್ಯದ ಕೆಲವೆಡೆ ಒಳರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯಿತು. ಅದೇ ನೀರು ಮನೆಗಳಿಗೆ ನುಗ್ಗಿತ್ತು. ನಿವಾಸಿಗಳು, ರಾತ್ರಿಯೀರಿ ನೀರು ಹೊರಹಾಕಿದರು.</p>.<p>‘ಗುರುವಾರ ಸಂಜೆಯಿಂದ ರಾತ್ರಿಯವರೆಗೂ ನಗರದಲ್ಲಿ ಉತ್ತಮ ಮಳೆ ಆಗಿದೆ. ರಸ್ತೆಯಲ್ಲಿ ನೀರು ಹರಿಯುತ್ತಿದ್ದ ಹಾಗೂ ಮರದ ಕೊಂಬೆಗಳು ಬಿದ್ದಿದ್ದ ದೂರುಗಳು ಬಂದಿದ್ದವು. ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಸರಿಪಡಿಸಲಾಗಿದೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<p>ಮೈದಾನಕ್ಕೆ ನೀರು: ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ನೀರು ನುಗ್ಗಿತ್ತು. ದೀಪಾವಳಿ ಹಬ್ಬಕ್ಕೆಂದು ಮೈದಾನದಲ್ಲಿ ಪಟಾಕಿ ಮಳಿಗೆ ತೆರೆಯಲಾಗಿತ್ತು. ಮಳಿಗೆಗಳಿಗೆ ನೀರು ನುಗ್ಗಿ, ಪಟಾಕಿಗಳು ತೊಯ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>